ರಾಜ್ಯ

ರಾಜ್ಯದಲ್ಲಿ ಗೋವುಗಳ ಮೇಲಿನ ದಾಳಿಗೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಖಂಡನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗೋವುಗಳ ಮೇಲೆ ದಾಳಿ ನಡೆಯುತ್ತಿದ್ದು, ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲೊಡ್ಡುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ಅವರು, ರಾಜ್ಯದಲ್ಲಿ ಹಿಂದುಗಳ ಭಾವನೆಗಳನ್ನು ಕೆರಳಿಸಲು ಹಾಗೂ ಘಾಸಿಗೊಳಿಸುವ ಉದ್ದೇಶದಿಂದ ಮತಾಂಧ ಶಕ್ತಿಗಳು ಗೋವುಗಳ ಮೇಲೆ ದಾಳಿ ನಡೆಸುತ್ತಿವೆ.

ಇಷ್ಟೆಲ್ಲಾ ಘಟನೆಗಳಾದರೂ ರಾಜ್ಯ ಸರ್ಕಾರ ಮಾತ್ರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯನವರೇ ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ದಾಳಿಗಳು ದೊಡ್ಡ ಪಿತೂರಿಯನ್ನು ಸೂಚಿಸುತ್ತಿವೆ. ಇದು ಮತಾಂಧ ಮತ್ತು ಮೂಲಭೂತವಾದಿ ಶಕ್ತಿಗಳನ್ನು ಒಳಗೊಂಡಿರುವ ಪ್ರಮುಖ ಜಿಹಾದಿ ಸಂಚು ಎಂದು ತೋರುತ್ತದೆ ಎಂದು ಕಿಡಿಕಾರಿದರು.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ್ದು, ಕಾರವಾರದ ಹೊನ್ನಾವರ ತಾಲ್ಲೂಕಿನ ಸಾಲಕೋಡ ಗ್ರಾಮದಲ್ಲಿ ಗರ್ಭಿಣಿ ಹಸುವನ್ನು ಕೊಂದು ಹಾಕಿದ್ದಾರೆ. ಕರುವನ್ನು ಹೊರತೆಗೆದು ಬಿಸಾಡಿ ಮಾಂಸ ಕೊಂಡೊಯ್ದಿದ್ದಾರೆ. ಇಷ್ಟೆಲ್ಲಾ ಘಟನೆಗಳಾದರೂ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಏನನ್ನೂ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

58 mins ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

2 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

2 hours ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

3 hours ago

ಹಾಡುಪಾಡು | ಜೈಫುಲ್ ಮೇಷ್ಟ್ರ ಕಷ್ಟಕ್ಕೆ ಮಿಡಿಯುತ್ತಿರುವ ಶಿಷ್ಯ ಹೃದಯಗಳು

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…

4 hours ago

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

15 hours ago