ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗೋವುಗಳ ಮೇಲೆ ದಾಳಿ ನಡೆಯುತ್ತಿದ್ದು, ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲೊಡ್ಡುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಹಿಂದುಗಳ ಭಾವನೆಗಳನ್ನು ಕೆರಳಿಸಲು ಹಾಗೂ ಘಾಸಿಗೊಳಿಸುವ ಉದ್ದೇಶದಿಂದ ಮತಾಂಧ ಶಕ್ತಿಗಳು ಗೋವುಗಳ ಮೇಲೆ ದಾಳಿ ನಡೆಸುತ್ತಿವೆ.
ಇಷ್ಟೆಲ್ಲಾ ಘಟನೆಗಳಾದರೂ ರಾಜ್ಯ ಸರ್ಕಾರ ಮಾತ್ರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಿಎಂ ಸಿದ್ದರಾಮಯ್ಯನವರೇ ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ದಾಳಿಗಳು ದೊಡ್ಡ ಪಿತೂರಿಯನ್ನು ಸೂಚಿಸುತ್ತಿವೆ. ಇದು ಮತಾಂಧ ಮತ್ತು ಮೂಲಭೂತವಾದಿ ಶಕ್ತಿಗಳನ್ನು ಒಳಗೊಂಡಿರುವ ಪ್ರಮುಖ ಜಿಹಾದಿ ಸಂಚು ಎಂದು ತೋರುತ್ತದೆ ಎಂದು ಕಿಡಿಕಾರಿದರು.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ್ದು, ಕಾರವಾರದ ಹೊನ್ನಾವರ ತಾಲ್ಲೂಕಿನ ಸಾಲಕೋಡ ಗ್ರಾಮದಲ್ಲಿ ಗರ್ಭಿಣಿ ಹಸುವನ್ನು ಕೊಂದು ಹಾಕಿದ್ದಾರೆ. ಕರುವನ್ನು ಹೊರತೆಗೆದು ಬಿಸಾಡಿ ಮಾಂಸ ಕೊಂಡೊಯ್ದಿದ್ದಾರೆ. ಇಷ್ಟೆಲ್ಲಾ ಘಟನೆಗಳಾದರೂ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಏನನ್ನೂ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…