ರಾಜ್ಯ

ಕಂಡಕ್ಟರ್ ಮೇಲೆ ಹಲ್ಲೆ ಖಂಡನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕುವೆಂಪುನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಸಚಿವರು, ಘಟನೆ ನಡೆದ ತಕ್ಷಣವೇ ನಾನು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ. ಇದರ ಮಧ್ಯೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ ಎಂದರು.

ನಾವು ಎಲ್ಲರೂ ಸ್ವರಾಜ್ಯದ ಬಗ್ಗೆ ಮಾತನಾಡುತ್ತೇವೆ. ನಾವು ಮೊದಲಿಗೆ ಭಾರತೀಯರು, ಕನ್ನಡಿಗರು, ಕರ್ನಾಟಕದ ಸುವರ್ಣ ಮಹೋತ್ಸವನ್ನು ಅದ್ದೂರಿಯಾಗಿ ಅಚರಿಸಿದ್ದೇವೆ. ಸ್ವರಾಜ್ಯದ ಬಗ್ಗೆ ಮಾತನಾಡುವಾಗ ಕೆಲವೊಂದು ಪುಂಡರು ಬಂದು ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ನನ್ನ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ನಾವು ಭಾಷಾ ವಿವಾದವನ್ನೇ ಬೇರು ಸಮೇತ ಕಿತ್ತು ಹಾಕಿದ್ದೇವೆ. ನಮಗೆ ರಜೆ ದಿನಗಳು ಇವೆ. ಆದರೆ, ಸಾರಿಗೆ, ಆರೋಗ್ಯ, ಪೊಲೀಸ್ ಇಲಾಖೆ ನೌಕರರು ಹಬ್ಬದಿನಗಳಲ್ಲೂ ದುಡಿಯುತ್ತಾರೆ. ಇಂಥವರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಮೊದಲಿಗೆ ನಾವು ಭಾರತೀಯರು. ದೇಶ ಅಂತ ಬಂದರೆ ಎಲ್ಲರೂ ಒಂದೇ. ನಾವು ನಾವುಗಳೇ ಜಗಳವಾಡುವುದು ಬೇಡ. ಎಲ್ಲರಿಗೂ ಭಾಷಾ ಅಭಿಮಾನ ಇರುತ್ತದೆ. ಈ ಪ್ರಕರಣವನ್ನು ಇಲ್ಲಿಗೆ ನಿಲ್ಲಿಸೋಣ ಎಂದು ಹೇಳಿದರು.

ಕಂಡಕ್ಟರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ಈ ಕುರಿತು ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ. ಕೆಳಹಂತದ ಅಧಿಕಾರಿಗಳಿಂದ ಕೆಲವು ತಪ್ಪುಗಳಾಗಿವೆ. ಈ ಸಂಬಂಧ ನಾನು ಈಗಾಗಲೇ ಗೃಹ ಸಚಿವರು, ಡಿಐಜಿ ಅವರೊಂದಿಗೆ ಮಾತನಾಡಿದ್ದು, ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿರುವೆ ಎಂದರು.

ಗೃಹಲಕ್ಷ್ಮೀ ಹಣ ಶೀಘ್ರವೇ ಬಿಡುಗಡೆ
ವಿರೋಧ ಪಕ್ಷಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿವೆ. ಇನ್ನು 8 ದಿನಗಳಲ್ಲಿ ಯಜಮಾನಿಯರ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ವೈದ್ಯರು ಅನುಮತಿ ಕೊಟ್ಟರೆ ಪ್ರಯಾಣ
ನಾಳೆ ಮತ್ತೊಂದು ಸಿಟಿ ಸ್ಕ್ಯಾನ್ ಮಾಡಿಸುತ್ತಿದ್ದು, ವೈದ್ಯರು ಅನುಮತಿ ನೀಡಿದರೆ ಬೆಂಗಳೂರಿಗೆ ಪ್ರಯಾಣಿಸುವೆ. ಮಾರ್ಚ್ 3 ರಿಂದ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago