ಬೆಳಗಾವಿ: ರೈಲಿನಲ್ಲಿ ಟಿಕೆಟ್ ಪರಿಶೀಲನೆ ವೇಳೆ ಟಿಕೆಟ್ ತೋರಿಸಿ ಎಂದಿದ್ದಕೆ ಟಿಸಿ ಸೇರಿ ಐವರ ಮೇಲೆ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.
ಈ ಘಟನೆ ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದ್ದು, ಘಟನೆ ಸಂಭವಿಸುವಾಗ ರೈಲು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡ ಬಳಿ ಚಲಿಸುತ್ತಿತ್ತು.
ಪಾಂಡಿಚೇರಿಯಿಂದ ಮುಂಬಯಿ ಮಾರ್ಗವಾಗಿ ಚಲಿಸುತ್ತಿದ್ದ ಚಾಲುಕ್ಯ ಎಕ್ಸ್ಪ್ರೆಸ್ ರೈಲಿನ ಎಸ್ 8 ಬೋಗಿಯಲ್ಲಿ ಇದ್ದ ಪ್ರಯಾಣಿಕನ ಬಳಿ ಟಿಸಿ ಟಿಕೆಟ್ ಕೇಳಿದ್ದಾರೆ. ಟಿಕೆಟ್ ತೋರಿಸದ ಪ್ರಯಾಣಿಕ ಟಿಸಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಹಲ್ಲೆ ತಡೆಯಲು ಹೋಗಿದ್ದ ಕೋಚ್ ಅಟೆಂಡರ್ಗೆ ಪ್ರಯಾಣಿಕ ಮನಸೋ ಇಚ್ಚೆ ಚಾಕು ಇರಿದಿದ್ದಾನೆ. ಆಸ್ಪತ್ರೆ ಸೇರಿಸಿದರು ಚಿಕಿತ್ಸೆ ಫಲಿಸದೇ ಕೋಚ್ ಅಟೆಂಡರ್ ಕೊನೆಯುಸಿರೆಳೆದಿದ್ದಾರೆ. ಇನ್ನು ಟಿಸಿ ಸೇರಿದಂತೆ ಉಳಿದ ಮೂವರು ಕೂಡ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆಯುತ್ತಿದೆ.
ಘಟನೆ ಬಳಿಕ ಆರೋಪಿಗಳು ರೈಲಿನಿಂದ ಜಿಗಿದು ಪರಾರಿಯಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…