ಬೆಳಗಾವಿ: ರೈಲಿನಲ್ಲಿ ಟಿಕೆಟ್ ಪರಿಶೀಲನೆ ವೇಳೆ ಟಿಕೆಟ್ ತೋರಿಸಿ ಎಂದಿದ್ದಕೆ ಟಿಸಿ ಸೇರಿ ಐವರ ಮೇಲೆ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.
ಈ ಘಟನೆ ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದ್ದು, ಘಟನೆ ಸಂಭವಿಸುವಾಗ ರೈಲು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡ ಬಳಿ ಚಲಿಸುತ್ತಿತ್ತು.
ಪಾಂಡಿಚೇರಿಯಿಂದ ಮುಂಬಯಿ ಮಾರ್ಗವಾಗಿ ಚಲಿಸುತ್ತಿದ್ದ ಚಾಲುಕ್ಯ ಎಕ್ಸ್ಪ್ರೆಸ್ ರೈಲಿನ ಎಸ್ 8 ಬೋಗಿಯಲ್ಲಿ ಇದ್ದ ಪ್ರಯಾಣಿಕನ ಬಳಿ ಟಿಸಿ ಟಿಕೆಟ್ ಕೇಳಿದ್ದಾರೆ. ಟಿಕೆಟ್ ತೋರಿಸದ ಪ್ರಯಾಣಿಕ ಟಿಸಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಹಲ್ಲೆ ತಡೆಯಲು ಹೋಗಿದ್ದ ಕೋಚ್ ಅಟೆಂಡರ್ಗೆ ಪ್ರಯಾಣಿಕ ಮನಸೋ ಇಚ್ಚೆ ಚಾಕು ಇರಿದಿದ್ದಾನೆ. ಆಸ್ಪತ್ರೆ ಸೇರಿಸಿದರು ಚಿಕಿತ್ಸೆ ಫಲಿಸದೇ ಕೋಚ್ ಅಟೆಂಡರ್ ಕೊನೆಯುಸಿರೆಳೆದಿದ್ದಾರೆ. ಇನ್ನು ಟಿಸಿ ಸೇರಿದಂತೆ ಉಳಿದ ಮೂವರು ಕೂಡ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆಯುತ್ತಿದೆ.
ಘಟನೆ ಬಳಿಕ ಆರೋಪಿಗಳು ರೈಲಿನಿಂದ ಜಿಗಿದು ಪರಾರಿಯಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…