ರಾಜ್ಯ

ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ಯತ್ನ : ರಾಹುಲ್‌ ಆರೋಪ

ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮಹದೇವಪುರ ಕ್ಷೇತ್ರದಲ್ಲಿ ಕೂಡ ಮತಗಳ್ಳತನವಾಗಿದ್ದ ಕುರಿತು ಮಾಹಿತಿ ನೀಡಿದ್ದರು.

ಕಾಂಗ್ರೆಸ್​ ಮತದಾರರನ್ನೇ ಟಾರ್ಗೆಟ್ ಮಾಡಲಾಗಿದೆ. ಆದಿವಾಸಿಗಳು, ಒಬಿಸಿ ಒಟ್ಟಿನಲ್ಲಿ ವಿರೋಧಪಕ್ಷಕ್ಕೆ ಮತಹಾಕುವವರ ಹೆಸರುಗಳನ್ನೇ ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಹಾಗಾದರೆ ಈ ಮತಗಳ್ಳತನ ಸಿಕ್ಕಿಬಿದ್ದಿದ್ದು ಹೇಗೆ ಎಂದರೆ, ಆಳಂದದಲ್ಲಿ ಬಿಎಲ್​ಒ ಅವರ ಸಂಬಂಧಿಯ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿತ್ತು. ಆಗ ತನಿಖೆ ಆರಂಭಿಸಿದಾಗ ಅವರ ಸಂಬಂಧಿಯ ಪಕ್ಕದ ಮನೆಯವರು ಅವರ ಹೆಸರನ್ನು ತೆಗೆಸಿದ್ದಾರೆ ಎಂಬುದು ತಿಳಿದುಬಂದಿತ್ತು, ಬಳಿಕ ಅಲ್ಲಿ ಹೋಗಿ ವಿಚಾರಿಸಿದಾಗ ನಾವು ಅರ್ಜಿ ಕೊಟ್ಟಿಲ್ಲ, ಯಾರ ಹೆಸರನ್ನೂ ತೆಗೆಸಿಲ್ಲ ಎಂದು ಹೇಳಿದಾಗ ಕೆಲವು ವಿಚಾರಗಳು ಬಹಿರಂಗಗೊಂಡಿವೆ. ಒಬ್ಬರ ಹೆಸರು ಬಳಸಿಕೊಂಡು ಮತದಾರರ ಪಟ್ಟಿಯಿಂದ 12 ಜನರ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿರುವುದು ತಿಳಿದುಬಂದಿದೆ. ಆದರೆ ಅವರು ನಾನು ಯಾವ ಅರ್ಜಿಯನ್ನೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಆಳಂದಲ್ಲಿ 6018ಜನರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಎಲ್ಲಾ ಹೆಸರುಗಳನ್ನು ಕರ್ನಾಟಕದ ಮೊಬೈಲ್ ಸಂಖ್ಯೆಯಿಂದಲೇ ಡಿಲೀಟ್ ಮಾಡಲಾಗಿದೆ. ಆದರೆ ಎಲ್ಲೋ ಕುಳಿತು ಈ ಹೆಸರುಗಳನ್ನು ತೆಗೆಸಲಾಗಿದೆ. ನಾವು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಇವರ ಹೆಸರುಗಳನ್ನು ತೆಗೆಸಲು ಬಳಸಿದ ಮೊಬೈಲ್ ಸಂಖ್ಯೆ ಯಾವುದು, ಹಾಗಾದರೆ ಒಟಿಪಿ ಎಲ್ಲಿಗೆ ಬಂದಿದೆ ಇದ್ಯಾವ ಮಾಹಿತಿಯೂ ಸಿಗುತ್ತಿಲ್ಲ. ಪ್ರತಿ ಚುನಾವಣೆ ಸಮಯದಲ್ಲೂ ಮತಗಳ್ಳತನದ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಲೇ ಇದ್ದವು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನೇರ ಆರೋಪ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ನೇರ ಆರೋಪ ಮಾಡಿದ್ದಾರೆ. 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಬರೆದು ಮಾಹಿತಿ ಕೇಳಲಾಗಿದೆ, ಆದರೆ ಅವರಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ, ಸಿಐಡಿ ಕೂಡ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಫೆಬ್ರವರಿ 23ರಂದು ಎಫ್​ಐಆರ್​ ದಾಖಲಿಸಲಾಗಿತ್ತು. ಹಾಗಾದರೆ ಇದೆಲ್ಲದರ ಹಿಂದೆ ಜ್ಞಾನೇಶ್ ಕುಮಾರ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 mins ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

14 mins ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

2 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

3 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

4 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

4 hours ago