ರಾಜ್ಯ

ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ಯತ್ನ : ರಾಹುಲ್‌ ಆರೋಪ

ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಹಿಂದೆ ಮಹದೇವಪುರ ಕ್ಷೇತ್ರದಲ್ಲಿ ಕೂಡ ಮತಗಳ್ಳತನವಾಗಿದ್ದ ಕುರಿತು ಮಾಹಿತಿ ನೀಡಿದ್ದರು.

ಕಾಂಗ್ರೆಸ್​ ಮತದಾರರನ್ನೇ ಟಾರ್ಗೆಟ್ ಮಾಡಲಾಗಿದೆ. ಆದಿವಾಸಿಗಳು, ಒಬಿಸಿ ಒಟ್ಟಿನಲ್ಲಿ ವಿರೋಧಪಕ್ಷಕ್ಕೆ ಮತಹಾಕುವವರ ಹೆಸರುಗಳನ್ನೇ ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಹಾಗಾದರೆ ಈ ಮತಗಳ್ಳತನ ಸಿಕ್ಕಿಬಿದ್ದಿದ್ದು ಹೇಗೆ ಎಂದರೆ, ಆಳಂದದಲ್ಲಿ ಬಿಎಲ್​ಒ ಅವರ ಸಂಬಂಧಿಯ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿತ್ತು. ಆಗ ತನಿಖೆ ಆರಂಭಿಸಿದಾಗ ಅವರ ಸಂಬಂಧಿಯ ಪಕ್ಕದ ಮನೆಯವರು ಅವರ ಹೆಸರನ್ನು ತೆಗೆಸಿದ್ದಾರೆ ಎಂಬುದು ತಿಳಿದುಬಂದಿತ್ತು, ಬಳಿಕ ಅಲ್ಲಿ ಹೋಗಿ ವಿಚಾರಿಸಿದಾಗ ನಾವು ಅರ್ಜಿ ಕೊಟ್ಟಿಲ್ಲ, ಯಾರ ಹೆಸರನ್ನೂ ತೆಗೆಸಿಲ್ಲ ಎಂದು ಹೇಳಿದಾಗ ಕೆಲವು ವಿಚಾರಗಳು ಬಹಿರಂಗಗೊಂಡಿವೆ. ಒಬ್ಬರ ಹೆಸರು ಬಳಸಿಕೊಂಡು ಮತದಾರರ ಪಟ್ಟಿಯಿಂದ 12 ಜನರ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿರುವುದು ತಿಳಿದುಬಂದಿದೆ. ಆದರೆ ಅವರು ನಾನು ಯಾವ ಅರ್ಜಿಯನ್ನೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಆಳಂದಲ್ಲಿ 6018ಜನರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಎಲ್ಲಾ ಹೆಸರುಗಳನ್ನು ಕರ್ನಾಟಕದ ಮೊಬೈಲ್ ಸಂಖ್ಯೆಯಿಂದಲೇ ಡಿಲೀಟ್ ಮಾಡಲಾಗಿದೆ. ಆದರೆ ಎಲ್ಲೋ ಕುಳಿತು ಈ ಹೆಸರುಗಳನ್ನು ತೆಗೆಸಲಾಗಿದೆ. ನಾವು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಇವರ ಹೆಸರುಗಳನ್ನು ತೆಗೆಸಲು ಬಳಸಿದ ಮೊಬೈಲ್ ಸಂಖ್ಯೆ ಯಾವುದು, ಹಾಗಾದರೆ ಒಟಿಪಿ ಎಲ್ಲಿಗೆ ಬಂದಿದೆ ಇದ್ಯಾವ ಮಾಹಿತಿಯೂ ಸಿಗುತ್ತಿಲ್ಲ. ಪ್ರತಿ ಚುನಾವಣೆ ಸಮಯದಲ್ಲೂ ಮತಗಳ್ಳತನದ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಲೇ ಇದ್ದವು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನೇರ ಆರೋಪ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ನೇರ ಆರೋಪ ಮಾಡಿದ್ದಾರೆ. 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಬರೆದು ಮಾಹಿತಿ ಕೇಳಲಾಗಿದೆ, ಆದರೆ ಅವರಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ, ಸಿಐಡಿ ಕೂಡ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಫೆಬ್ರವರಿ 23ರಂದು ಎಫ್​ಐಆರ್​ ದಾಖಲಿಸಲಾಗಿತ್ತು. ಹಾಗಾದರೆ ಇದೆಲ್ಲದರ ಹಿಂದೆ ಜ್ಞಾನೇಶ್ ಕುಮಾರ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

11 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

12 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

12 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

12 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

13 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

14 hours ago