ಬೆಂಗಳೂರು: ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಜಿಪಿ ಪ್ರಣವ್ ಮೊಹಂತಿ ಅವರಿಂದು ನನ್ನನ್ನು ಭೇಟಿಯಾಗಿದ್ದರು. ನಕ್ಸಲರ ಶರಣಾಗುವ ಬಗ್ಗೆ ಮಾತನಾಡಲು ನನ್ನ ಬಳಿಗೆ ಬಂದಿದ್ದರು. ಅವರಿಗೆ ಕೆಲವು ಸೂಚನೆಗಳನ್ನು ನೀಡಿದ್ದೇನೆ ಎಂದು ಮಾಹಿತಿ ನೀಡಿದರು.
ನಕ್ಸಲರನ್ನು ಶರಣಾಗತಿ ಮಾಡಿಸುವುದೇ ಉತ್ತಮ. ಅವರು ಗುಂಡು ಹಾರಿಸುತ್ತಾರೆ. ನಮ್ಮವರು ಗುಂಡು ಹಾರಿಸುತ್ತಾರೆ. ಅದನ್ನು ಬದಿಗಿಟ್ಟು ಶರಣಾಗಲು ಈಗಾಗಲೇ ಮುಕ್ತ ಆಹ್ವಾನ ನೀಡಿದ್ದೇವೆ ಎಂದರು.
ಇನ್ನು ಕಲಬುರ್ಗಿ ಜೈಲಿನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಇದರಲ್ಲಿ ಜೈಲರ್ ಹಾಗೂ ಅಧಿಕಾರಿಗಳ ತಪ್ಪಿದ್ದರೆ ಅವರ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದು ಖಚಿತ ಎಂದು ಸೂಚನೆ ನೀಡಿದರು.
ಇನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಕುರಿತಂತೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳಿವೆ. ಅದರ ಬಗ್ಗೆ ಚರ್ಚಿಸಿ, ಬಗೆಹರಿಸುವುದು ಈ ಅಧಿವೇಶನದ ಉದ್ದೇಶ. ಬಿಜೆಪಿಯವರು ಹೋರಾಟ ಮಾಡಲಿ, ಬೇಡ ಎನ್ನುವುದಿಲ್ಲ. ಆ ಭಾಗದ ಜನರ ಸಮಸ್ಯೆ ಕುರಿತು ಹೆಚ್ಚು ಚರ್ಚೆ ನಡೆಸಲಿ ಎಂದರು.
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…