ಬೆಂಗಳೂರು: ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಜಿಪಿ ಪ್ರಣವ್ ಮೊಹಂತಿ ಅವರಿಂದು ನನ್ನನ್ನು ಭೇಟಿಯಾಗಿದ್ದರು. ನಕ್ಸಲರ ಶರಣಾಗುವ ಬಗ್ಗೆ ಮಾತನಾಡಲು ನನ್ನ ಬಳಿಗೆ ಬಂದಿದ್ದರು. ಅವರಿಗೆ ಕೆಲವು ಸೂಚನೆಗಳನ್ನು ನೀಡಿದ್ದೇನೆ ಎಂದು ಮಾಹಿತಿ ನೀಡಿದರು.
ನಕ್ಸಲರನ್ನು ಶರಣಾಗತಿ ಮಾಡಿಸುವುದೇ ಉತ್ತಮ. ಅವರು ಗುಂಡು ಹಾರಿಸುತ್ತಾರೆ. ನಮ್ಮವರು ಗುಂಡು ಹಾರಿಸುತ್ತಾರೆ. ಅದನ್ನು ಬದಿಗಿಟ್ಟು ಶರಣಾಗಲು ಈಗಾಗಲೇ ಮುಕ್ತ ಆಹ್ವಾನ ನೀಡಿದ್ದೇವೆ ಎಂದರು.
ಇನ್ನು ಕಲಬುರ್ಗಿ ಜೈಲಿನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಇದರಲ್ಲಿ ಜೈಲರ್ ಹಾಗೂ ಅಧಿಕಾರಿಗಳ ತಪ್ಪಿದ್ದರೆ ಅವರ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದು ಖಚಿತ ಎಂದು ಸೂಚನೆ ನೀಡಿದರು.
ಇನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಕುರಿತಂತೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳಿವೆ. ಅದರ ಬಗ್ಗೆ ಚರ್ಚಿಸಿ, ಬಗೆಹರಿಸುವುದು ಈ ಅಧಿವೇಶನದ ಉದ್ದೇಶ. ಬಿಜೆಪಿಯವರು ಹೋರಾಟ ಮಾಡಲಿ, ಬೇಡ ಎನ್ನುವುದಿಲ್ಲ. ಆ ಭಾಗದ ಜನರ ಸಮಸ್ಯೆ ಕುರಿತು ಹೆಚ್ಚು ಚರ್ಚೆ ನಡೆಸಲಿ ಎಂದರು.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…