ಬೆಂಗಳೂರು: ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಜಿಪಿ ಪ್ರಣವ್ ಮೊಹಂತಿ ಅವರಿಂದು ನನ್ನನ್ನು ಭೇಟಿಯಾಗಿದ್ದರು. ನಕ್ಸಲರ ಶರಣಾಗುವ ಬಗ್ಗೆ ಮಾತನಾಡಲು ನನ್ನ ಬಳಿಗೆ ಬಂದಿದ್ದರು. ಅವರಿಗೆ ಕೆಲವು ಸೂಚನೆಗಳನ್ನು ನೀಡಿದ್ದೇನೆ ಎಂದು ಮಾಹಿತಿ ನೀಡಿದರು.
ನಕ್ಸಲರನ್ನು ಶರಣಾಗತಿ ಮಾಡಿಸುವುದೇ ಉತ್ತಮ. ಅವರು ಗುಂಡು ಹಾರಿಸುತ್ತಾರೆ. ನಮ್ಮವರು ಗುಂಡು ಹಾರಿಸುತ್ತಾರೆ. ಅದನ್ನು ಬದಿಗಿಟ್ಟು ಶರಣಾಗಲು ಈಗಾಗಲೇ ಮುಕ್ತ ಆಹ್ವಾನ ನೀಡಿದ್ದೇವೆ ಎಂದರು.
ಇನ್ನು ಕಲಬುರ್ಗಿ ಜೈಲಿನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಇದರಲ್ಲಿ ಜೈಲರ್ ಹಾಗೂ ಅಧಿಕಾರಿಗಳ ತಪ್ಪಿದ್ದರೆ ಅವರ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದು ಖಚಿತ ಎಂದು ಸೂಚನೆ ನೀಡಿದರು.
ಇನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಕುರಿತಂತೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳಿವೆ. ಅದರ ಬಗ್ಗೆ ಚರ್ಚಿಸಿ, ಬಗೆಹರಿಸುವುದು ಈ ಅಧಿವೇಶನದ ಉದ್ದೇಶ. ಬಿಜೆಪಿಯವರು ಹೋರಾಟ ಮಾಡಲಿ, ಬೇಡ ಎನ್ನುವುದಿಲ್ಲ. ಆ ಭಾಗದ ಜನರ ಸಮಸ್ಯೆ ಕುರಿತು ಹೆಚ್ಚು ಚರ್ಚೆ ನಡೆಸಲಿ ಎಂದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…