ಬೆಂಗಳೂರು: ಕೆಎಎಸ್ ಪೂರ್ವಭಾವಿ ಪರೀಕ್ಷೆಯು ಆಗಸ್ಟ್ 27 ರಂದು ನಡೆಯಲಿದೆ. ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಅಭ್ಯರ್ಥಿಗಳು ತಯಾರಿಯಾಗಲೂ ಸಾಕಷ್ಟು ಸಮಯ ನೀಡಲಾಗಿದೆ. ತರಾತುರಿಯಲ್ಲೇನು ಪರೀಕ್ಷೆ ನಡೆಸುತ್ತಿಲ್ಲ ಎಂದು ಸರ್ಕಾರ ಸ್ಟಷ್ಟಪಡಿಸಿದೆ.
ಕೆಲ ಆಕಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಸದ್ಯ ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸರ್ಕಾರ, ಪರೀಕ್ಷೆ ಮುಂದೂಡುವಂತೆ ಕೆಲ ಕೆಎಎಸ್ ಆಕಾಂಕ್ಷಿಗಳು ಹಿರಿಯ ಅಧಿಕಾರಿಗಳಿಂದ ಒತ್ತಡ ತರುತ್ತಿದ್ದಾರೆ. ಅಲ್ಲದೇ, ಅವರು ಕೆಪಿಎಸ್ಸಿಯಲ್ಲಿ ಹಗರಣ ನಡೆದಿದೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ, ಯಾವುದೇ ಹಗರಣ ನಡೆದಿಲ್ಲ. ಆಗಸ್ಟ್ 27ರಂದೇ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಅಂದು ನಡೆಯುವ ಪರೀಕ್ಷೆಯಲ್ಲಿ 2017-18 ರಲ್ಲಿ ಪರೀಕ್ಷೆ ಬರೆದಿದ್ದ 1500 ಅಭ್ಯರ್ಥಿಗಳು ಸೇರಿ ಒಟ್ಟು2.5ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಅಧಿಸೂಚನೆ ಪ್ರಕಟವಾದ ದಿನದಿಂದ ಈವರೆಗೂ ಯುಪಿಎಸ್ಸಿ ಪರೀಕ್ಷೆ, ಲೋಕಸಭಾ ಚುನಾವಣೆ ಹಾಗೂ ಅಭ್ಯರ್ಥಿಗಳ ಮನವಿ ಮೇರೆಗೆ ಐದರಿಂದ ಆರು ಬಾರಿ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿದೆ. ಆದ್ದರಿಂದ, ಅಭ್ಯರ್ಥಿಗಳಿಗೆ ಪರೀಕ್ಷೆಗೆ ತಯಾರಿಯಾಗಲು ಸಾಕಷ್ಟು ಸಮಯ ನೀಡಲಾಗಿದೆ ಎಂಬ ಅಂಶವು ಸ್ಪಷ್ಟವಾಗಿದೆ. ಕೆಪಿಎಸ್ಸಿ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿದೆ ಎಂದು ಹೇಳಲು ಯಾವುದೇ ಆಧಾರವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಪ್ರಶ್ನೆ ಪತ್ರಿಕೆಗಳ ಮುದ್ರಣಕ್ಕೆ ಸುಮಾರು 4-5 ಕೋಟಿ ಖರ್ಚಾಗುತ್ತದೆ. ಎರಡು ತಿಂಗಳು ಮುಂದೂಡಿ ಎಂದರೆ ಮುದ್ರಿತ ಪತ್ರಿಕೆಗಳನ್ನು ನಾಶಪಡಿಸಿ ಹೊಸ ಪತ್ರಿಕೆಗಳನ್ನು ಮುದ್ರಿಸಬೇಕು. ಅಲ್ಲದೇ, ಪೇಪರರ್ ಸೋರಿಕೆಯಾಗುವ ಅಪಾಯವಿರುವುದರಿಂದ ಪೇಪರ್ಗಳನ್ನು ಹೆಚ್ಚು ಹೊತ್ತು ಇಡುವಂತಿಲ್ಲ ಎಂದು ಹೇಳಿದೆ.
ಲಂಡನ್ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ…
ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ…
ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…
ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…
ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…
ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…