ರಾಜ್ಯ

ಆ.27 ಕೆಪಿಎಸ್‌ಸಿ ಪರೀಕ್ಷೆ: ಮುಂದೂಡಿಕೆ ಇಲ್ಲದ ಬಗ್ಗೆ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ಕೆಎಎಸ್‌ ಪೂರ್ವಭಾವಿ ಪರೀಕ್ಷೆಯು ಆಗಸ್ಟ್‌ 27 ರಂದು ನಡೆಯಲಿದೆ. ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಅಭ್ಯರ್ಥಿಗಳು ತಯಾರಿಯಾಗಲೂ ಸಾಕಷ್ಟು ಸಮಯ ನೀಡಲಾಗಿದೆ. ತರಾತುರಿಯಲ್ಲೇನು ಪರೀಕ್ಷೆ ನಡೆಸುತ್ತಿಲ್ಲ ಎಂದು ಸರ್ಕಾರ ಸ್ಟಷ್ಟಪಡಿಸಿದೆ.

ಕೆಲ ಆಕಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಸದ್ಯ ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸರ್ಕಾರ, ಪರೀಕ್ಷೆ ಮುಂದೂಡುವಂತೆ ಕೆಲ ಕೆಎಎಸ್ ಆಕಾಂಕ್ಷಿಗಳು ಹಿರಿಯ ಅಧಿಕಾರಿಗಳಿಂದ ಒತ್ತಡ ತರುತ್ತಿದ್ದಾರೆ. ಅಲ್ಲದೇ, ಅವರು ಕೆಪಿಎಸ್ಸಿಯಲ್ಲಿ ಹಗರಣ ನಡೆದಿದೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ, ಯಾವುದೇ ಹಗರಣ ನಡೆದಿಲ್ಲ. ಆಗಸ್ಟ್‌ 27ರಂದೇ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

ಅಂದು ನಡೆಯುವ ಪರೀಕ್ಷೆಯಲ್ಲಿ 2017-18 ರಲ್ಲಿ ಪರೀಕ್ಷೆ ಬರೆದಿದ್ದ 1500 ಅಭ್ಯರ್ಥಿಗಳು ಸೇರಿ ಒಟ್ಟು2.5ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಅಧಿಸೂಚನೆ ಪ್ರಕಟವಾದ ದಿನದಿಂದ ಈವರೆಗೂ ಯುಪಿಎಸ್‌ಸಿ ಪರೀಕ್ಷೆ, ಲೋಕಸಭಾ ಚುನಾವಣೆ ಹಾಗೂ ಅಭ್ಯರ್ಥಿಗಳ ಮನವಿ ಮೇರೆಗೆ ಐದರಿಂದ ಆರು ಬಾರಿ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿದೆ. ಆದ್ದರಿಂದ, ಅಭ್ಯರ್ಥಿಗಳಿಗೆ ಪರೀಕ್ಷೆಗೆ ತಯಾರಿಯಾಗಲು ಸಾಕಷ್ಟು ಸಮಯ ನೀಡಲಾಗಿದೆ ಎಂಬ ಅಂಶವು ಸ್ಪಷ್ಟವಾಗಿದೆ. ಕೆಪಿಎಸ್‌ಸಿ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿದೆ ಎಂದು ಹೇಳಲು ಯಾವುದೇ ಆಧಾರವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪ್ರಶ್ನೆ ಪತ್ರಿಕೆಗಳ ಮುದ್ರಣಕ್ಕೆ ಸುಮಾರು 4-5 ಕೋಟಿ ಖರ್ಚಾಗುತ್ತದೆ. ಎರಡು ತಿಂಗಳು ಮುಂದೂಡಿ ಎಂದರೆ ಮುದ್ರಿತ ಪತ್ರಿಕೆಗಳನ್ನು ನಾಶಪಡಿಸಿ ಹೊಸ ಪತ್ರಿಕೆಗಳನ್ನು ಮುದ್ರಿಸಬೇಕು. ಅಲ್ಲದೇ, ಪೇಪರರ್‌ ಸೋರಿಕೆಯಾಗುವ ಅಪಾಯವಿರುವುದರಿಂದ ಪೇಪರ್‌ಗಳನ್ನು ಹೆಚ್ಚು ಹೊತ್ತು ಇಡುವಂತಿಲ್ಲ ಎಂದು ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

5 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

5 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

6 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago