ರಾಜ್ಯ

ಆ.27 ಕೆಪಿಎಸ್‌ಸಿ ಪರೀಕ್ಷೆ: ಮುಂದೂಡಿಕೆ ಇಲ್ಲದ ಬಗ್ಗೆ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ಕೆಎಎಸ್‌ ಪೂರ್ವಭಾವಿ ಪರೀಕ್ಷೆಯು ಆಗಸ್ಟ್‌ 27 ರಂದು ನಡೆಯಲಿದೆ. ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಅಭ್ಯರ್ಥಿಗಳು ತಯಾರಿಯಾಗಲೂ ಸಾಕಷ್ಟು ಸಮಯ ನೀಡಲಾಗಿದೆ. ತರಾತುರಿಯಲ್ಲೇನು ಪರೀಕ್ಷೆ ನಡೆಸುತ್ತಿಲ್ಲ ಎಂದು ಸರ್ಕಾರ ಸ್ಟಷ್ಟಪಡಿಸಿದೆ.

ಕೆಲ ಆಕಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಸದ್ಯ ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸರ್ಕಾರ, ಪರೀಕ್ಷೆ ಮುಂದೂಡುವಂತೆ ಕೆಲ ಕೆಎಎಸ್ ಆಕಾಂಕ್ಷಿಗಳು ಹಿರಿಯ ಅಧಿಕಾರಿಗಳಿಂದ ಒತ್ತಡ ತರುತ್ತಿದ್ದಾರೆ. ಅಲ್ಲದೇ, ಅವರು ಕೆಪಿಎಸ್ಸಿಯಲ್ಲಿ ಹಗರಣ ನಡೆದಿದೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ, ಯಾವುದೇ ಹಗರಣ ನಡೆದಿಲ್ಲ. ಆಗಸ್ಟ್‌ 27ರಂದೇ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

ಅಂದು ನಡೆಯುವ ಪರೀಕ್ಷೆಯಲ್ಲಿ 2017-18 ರಲ್ಲಿ ಪರೀಕ್ಷೆ ಬರೆದಿದ್ದ 1500 ಅಭ್ಯರ್ಥಿಗಳು ಸೇರಿ ಒಟ್ಟು2.5ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಅಧಿಸೂಚನೆ ಪ್ರಕಟವಾದ ದಿನದಿಂದ ಈವರೆಗೂ ಯುಪಿಎಸ್‌ಸಿ ಪರೀಕ್ಷೆ, ಲೋಕಸಭಾ ಚುನಾವಣೆ ಹಾಗೂ ಅಭ್ಯರ್ಥಿಗಳ ಮನವಿ ಮೇರೆಗೆ ಐದರಿಂದ ಆರು ಬಾರಿ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿದೆ. ಆದ್ದರಿಂದ, ಅಭ್ಯರ್ಥಿಗಳಿಗೆ ಪರೀಕ್ಷೆಗೆ ತಯಾರಿಯಾಗಲು ಸಾಕಷ್ಟು ಸಮಯ ನೀಡಲಾಗಿದೆ ಎಂಬ ಅಂಶವು ಸ್ಪಷ್ಟವಾಗಿದೆ. ಕೆಪಿಎಸ್‌ಸಿ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿದೆ ಎಂದು ಹೇಳಲು ಯಾವುದೇ ಆಧಾರವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪ್ರಶ್ನೆ ಪತ್ರಿಕೆಗಳ ಮುದ್ರಣಕ್ಕೆ ಸುಮಾರು 4-5 ಕೋಟಿ ಖರ್ಚಾಗುತ್ತದೆ. ಎರಡು ತಿಂಗಳು ಮುಂದೂಡಿ ಎಂದರೆ ಮುದ್ರಿತ ಪತ್ರಿಕೆಗಳನ್ನು ನಾಶಪಡಿಸಿ ಹೊಸ ಪತ್ರಿಕೆಗಳನ್ನು ಮುದ್ರಿಸಬೇಕು. ಅಲ್ಲದೇ, ಪೇಪರರ್‌ ಸೋರಿಕೆಯಾಗುವ ಅಪಾಯವಿರುವುದರಿಂದ ಪೇಪರ್‌ಗಳನ್ನು ಹೆಚ್ಚು ಹೊತ್ತು ಇಡುವಂತಿಲ್ಲ ಎಂದು ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago