ರಾಜ್ಯ

ಆ.27 ಕೆಪಿಎಸ್‌ಸಿ ಪರೀಕ್ಷೆ: ಮುಂದೂಡಿಕೆ ಇಲ್ಲದ ಬಗ್ಗೆ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ಕೆಎಎಸ್‌ ಪೂರ್ವಭಾವಿ ಪರೀಕ್ಷೆಯು ಆಗಸ್ಟ್‌ 27 ರಂದು ನಡೆಯಲಿದೆ. ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಅಭ್ಯರ್ಥಿಗಳು ತಯಾರಿಯಾಗಲೂ ಸಾಕಷ್ಟು ಸಮಯ ನೀಡಲಾಗಿದೆ. ತರಾತುರಿಯಲ್ಲೇನು ಪರೀಕ್ಷೆ ನಡೆಸುತ್ತಿಲ್ಲ ಎಂದು ಸರ್ಕಾರ ಸ್ಟಷ್ಟಪಡಿಸಿದೆ.

ಕೆಲ ಆಕಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಸದ್ಯ ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸರ್ಕಾರ, ಪರೀಕ್ಷೆ ಮುಂದೂಡುವಂತೆ ಕೆಲ ಕೆಎಎಸ್ ಆಕಾಂಕ್ಷಿಗಳು ಹಿರಿಯ ಅಧಿಕಾರಿಗಳಿಂದ ಒತ್ತಡ ತರುತ್ತಿದ್ದಾರೆ. ಅಲ್ಲದೇ, ಅವರು ಕೆಪಿಎಸ್ಸಿಯಲ್ಲಿ ಹಗರಣ ನಡೆದಿದೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ, ಯಾವುದೇ ಹಗರಣ ನಡೆದಿಲ್ಲ. ಆಗಸ್ಟ್‌ 27ರಂದೇ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

ಅಂದು ನಡೆಯುವ ಪರೀಕ್ಷೆಯಲ್ಲಿ 2017-18 ರಲ್ಲಿ ಪರೀಕ್ಷೆ ಬರೆದಿದ್ದ 1500 ಅಭ್ಯರ್ಥಿಗಳು ಸೇರಿ ಒಟ್ಟು2.5ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಅಧಿಸೂಚನೆ ಪ್ರಕಟವಾದ ದಿನದಿಂದ ಈವರೆಗೂ ಯುಪಿಎಸ್‌ಸಿ ಪರೀಕ್ಷೆ, ಲೋಕಸಭಾ ಚುನಾವಣೆ ಹಾಗೂ ಅಭ್ಯರ್ಥಿಗಳ ಮನವಿ ಮೇರೆಗೆ ಐದರಿಂದ ಆರು ಬಾರಿ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿದೆ. ಆದ್ದರಿಂದ, ಅಭ್ಯರ್ಥಿಗಳಿಗೆ ಪರೀಕ್ಷೆಗೆ ತಯಾರಿಯಾಗಲು ಸಾಕಷ್ಟು ಸಮಯ ನೀಡಲಾಗಿದೆ ಎಂಬ ಅಂಶವು ಸ್ಪಷ್ಟವಾಗಿದೆ. ಕೆಪಿಎಸ್‌ಸಿ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿದೆ ಎಂದು ಹೇಳಲು ಯಾವುದೇ ಆಧಾರವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪ್ರಶ್ನೆ ಪತ್ರಿಕೆಗಳ ಮುದ್ರಣಕ್ಕೆ ಸುಮಾರು 4-5 ಕೋಟಿ ಖರ್ಚಾಗುತ್ತದೆ. ಎರಡು ತಿಂಗಳು ಮುಂದೂಡಿ ಎಂದರೆ ಮುದ್ರಿತ ಪತ್ರಿಕೆಗಳನ್ನು ನಾಶಪಡಿಸಿ ಹೊಸ ಪತ್ರಿಕೆಗಳನ್ನು ಮುದ್ರಿಸಬೇಕು. ಅಲ್ಲದೇ, ಪೇಪರರ್‌ ಸೋರಿಕೆಯಾಗುವ ಅಪಾಯವಿರುವುದರಿಂದ ಪೇಪರ್‌ಗಳನ್ನು ಹೆಚ್ಚು ಹೊತ್ತು ಇಡುವಂತಿಲ್ಲ ಎಂದು ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

4 mins ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

36 mins ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

2 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

2 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

3 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

4 hours ago