ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಹಲವಾರು ಖಾಸಗಿ ಆಟೋ ಎಲ್ಪಿಜಿ ಔಟ್ಲೆಟ್ಗಳಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿದೆ.
ಈ ಬೆನ್ನಲ್ಲೆ, ಇದನ್ನು ಪರಿಹರಿಸಲು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಇಂಡಿಯನ್ ಆಯಿಲ್) ಮುಂದಾಗಿದ್ದು,ರಾಜ್ಯದಾದ್ಯಂತ ತನ್ನ ಆಟೋ ಎಲ್ಪಿಜಿ ಸರಬರಾಜನ್ನು ಗಮನಾರ್ಹವಾಗಿ ಹೆಚ್ಚಿಸಿದೆ.
ಚೆನ್ನೈನ ದಕ್ಷಿಣ ಪ್ರಾದೇಶಿಕ ಕಚೇರಿಯ ಇಂಡಿಯನ್ ಆಯಿಲ್ನ ಮುಖ್ಯ ಮಹಾಪ್ರಬಂಧಕ ವಿ. ವೆಟ್ರಿಸೆಲ್ವಕುಮಾರ್ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ, ಆಟೋ LPG ವಿತರಣಾ ಕೇಂದ್ರಗಳ ಮೂಲಕ ಆಟೋ ರಿಕ್ಷಾಗಳು ಮತ್ತು ಎಲ್ಪಿಜಿ ಚಾಲಿತ ಕಾರುಗಳ ಇಂಧನ ಅವಶ್ಯಕತೆಗಳನ್ನು ಪೂರೈಸುತ್ತಿದೆ. tನ್ನ ಮೂಲಸೌಕರ್ಯದ ಮೇಲೆ ಹೆಚ್ಚು ಒತ್ತು ನೀಡಿ ಬೇಡಿಕೆಯನ್ನು ಪೂರೈಸಲು ಇಂಡಿಯನ್ ಆಯಿಲ್ ಮುಂದಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಇಂಡಿಯನ್ ಆಯಿಲ್ನ ಆಟೋ LPG ವಿತರಣಾ ಕೇಂದ್ರಗಳಲ್ಲಿ ಸರಾಸರಿ ದೈನಂದಿನ ಮಾರಾಟವು 59.53 ಮೆಟ್ರಿಕ್ ಟನ್ಗಳಿಗೆ ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಸಂಸ್ಥೆಯು ರಾಜ್ಯದ ಎಲ್ಲಾ ಆಟೋ LPG ಕೇಂದ್ರಗಳಲ್ಲಿ ಸುಗಮ ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದು, ಆಟೋ ರಿಕ್ಷಾ ಚಾಲಕರು ಮತ್ತು LPG ವಾಹನ ಬಳಕೆದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…