Categories: ರಾಜ್ಯ

ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಅವಶ್ಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ: ಸಿಎಂ

ಬೆಂಗಳೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರತದ ಸಂವಿಧಾನ ಅಂಗೀಕರಣಗೊಂಡ 75 ನೇ ವಾರ್ಷಿಕೋತ್ಸವವನ್ನು ಸಂವಿಧಾನ ದಿನ ಎಂದು ಆಚರಿಸುತ್ತೇವೆ. ಕೇಂದ್ರ , ರಾಜ್ಯ ಸರ್ಕಾರಗಳು ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳು ಸಂವಿಧಾನದಂತೆ ನಡೆದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವಂತೆ ಕೆಲಸ ಮಾಡಬೇಕು. ಆದ್ದರಿಂದ ರಾಜ್ಯದ ಎಲ್ಲ ಶಾಲಾಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿ, ಅದರ ಆಶಯಗಳನ್ನು ವಿದ್ಯಾರ್ಥಿಗಳು ಮನನ ಮಾಡಿಕೊಳ್ಳಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಸರ್ಕಾರ ಸಂವಿಧಾನ ರಕ್ಷಿಸುವ ಕಾರ್ಯ ಮಾಡುತ್ತಿದೆ

ಸಂವಿಧಾನವನ್ನು ತಿದ್ದುಪಡಿ ಮಾಡಲಾಗುವುದು ಎಂಬ ಬಿಜೆಪಿಯವರ ಧೋರಣೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸಂವಿಧಾನಕ್ಕೆ ವಿರೋಧವಾಗಿರುವವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳೂ ಸಹ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮ್ಮೆ ನಮ್ಮದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

2 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

3 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

3 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

3 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

3 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

3 hours ago