ರಾಜ್ಯ

ಒಳ ಮೀಸಲಾತಿ ಕುರಿತು ಜಾಗೃತಿ ಮೂಡಿಸಬೇಕಿದೆ: ಆನೇಕಲ್ ನಾರಾಯಣಸ್ವಾಮಿ

ಬೆಂಗಳೂರು: ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತು ನೀಡಿರುವ ತೀರ್ಪು ರಾಜ್ಯ ಸರ್ಕಾರದ ಮಟ್ಟದಲ್ಲಿ ಅನುಷ್ಠಾನಗೊಳ್ಳುವವರೆಗೂ ಯಾವುದೇ ಹುದ್ದೆಗಳ ನೇಮಕಾತಿ ಆದೇಶ ಮತ್ತು ಈಗಾಗಲೇ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಮಾದಿಗ ಸಮುದಾಯ ಮತ್ತು ಒಳ ಪಂಗಡಗಳ ಸಮುದಾಯ ಒತ್ತಾಯಿಸಿದೆ.

ಬೆಂಗಳೂರಿನ ಗಾಂಧಿ ಭವನದಲ್ಲಿಂದು (ಆಗಸ್ಟ್ 19) ಮಾದಿಗ ಪೊಲಿಟಿಕಲ್ ಪೋರಂ, ಶೂದ್ರ ಪ್ರತಿಷ್ಠಾನವತಿಯಿಂದ ನಡೆದ ಐತಿಹಾಸಿಕವಾದ ಒಳ ಮೀಸಲಾತಿ ತೀರ್ಪು ಕುರಿತ ಒಂದು ಮುನ್ನೋಟ ಕುರಿತ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ನ ತೀರ್ಪುನಿಂದ ಅನೇಕ ಸಮಯದಾಯಗಳಿಗೆ ಸುದೀರ್ಘ ಹೋರಾಟದ ಜಯವಾಗಿದೆ, ಬೆಳಗಾವಿ ಮತ್ತು ಹುಬ್ಬಳಿಯಲ್ಲಿ ನಡೆದ ನಡೆದ ಬಹುದೊಡ್ಡ ಸಮಾವೇಶ, ಅನೇಕ ಮುಖಂಡರ ಹೋರಾಟದ ಪ್ರತಿಫಲವಾಗಿ ಒಳ ಮೀಸಲಾತಿ ಜಾರಿಗೆ ಕಾಲ ಕೂಡಿ ಬಂದಿದೆ ಇದರ ಜಾರಿಗಾಗಿ ಮಾದಿಗ ಸೇರಿದಂತೆ ಎಲ್ಲ ಸಮುದಾಯಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಇದರ ಜಾರಿಗೆ ನಾನೇ ನೇತೃತ್ವ ವಹಿಸುತ್ತೇನೆ ಎಂದು ಹೇಳಿದರು.

ಮಾಜಿ ಕೇಂದ್ರ ಸಚಿವ ಆನೇಕಲ್ ನಾರಾಯಣಸ್ವಾಮಿ ಮಾತನಾಡಿ, ಒಳ ಮೀಸಲಾತಿ ಕುರಿತಂತೆ ರಾಜ್ಯದ ಮಾದಿಗ ಸೇರಿದಂತೆ ಕೆಳ ಸಮುದಾಯಗಳಿಗೆ ಅರಿವು ಮೂಡಿಸುವ ಅಗತ್ಯವಾಗಿದೆ, ಇದುವರೆಗೂ ಒಳ ಮೀಸಲಾತಿ ಕುರಿತು ಬಹುತೇಕ ಜನರಿಗೆ ಸರಿಯಾದ ಅರಿವು ಇಲ್ಲ, ಒಳ ಮೀಸಲಾತಿ ತೀರ್ಪು ಕುರಿತು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಲಾಗುವುದು ಎಂದು ಹೇಳಿದರು.

ಒಳ ಮೀಸಲಾತಿ ಕುರಿತಂತೆ ಕೇಂದ್ರದ ಪ್ರಮುಖ ಮುಖಂಡರನ್ನು ಬೇಟಿಯಾಗಲು ತೆರಳಿದ ಸಂದರ್ಭದಲ್ಲಿ ನಮ್ಮ ಕುಳಿತು ಕೊಳ್ಳಲು ಕುರ್ಚಿ ಕೊಡದೇ ಅವಮಾನ ಮಾಡಿದರು,341ನೇ ವಿಧಿ ಇದಕ್ಕೆ ಸಂಬಂದಿಸುವುದಿಲ್ಲ ಎಂದು ಉತ್ತರ ನೀಡಿದರು ಇದನ್ನು ಸವಾಲಾಗಿ ಸ್ವೀಕರಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿ ಸೂಕ್ತ ನ್ಯಾಯ ಪಡೆದಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಧರ್ಮಸೇನಾ,ಒಳ ಮೀಸಲಾತಿ ಹೋರಾಟಗಾರರಾದ ಗಡಂ ವೆಂಕಟೇಶ್, ಪಿ.ಮೂರ್ತಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಗೋನಾಳ್ ಬೀಮಪ್ಪ, ಲಕ್ಷ್ಮೀ ನಾರಾಯಣಸ್ವಾಮಿ, ಆದಿ ಜಾಂಬವ ಸಮುದಾಯದ ಡಾ.ಬೀಮರಾಜು, ಸಿದ್ಧರಾಜು  ಮತ್ತಿತರರು ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

2 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

2 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

3 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

4 hours ago