ರಾಜ್ಯ

ಒಳ ಮೀಸಲಾತಿ ಕುರಿತು ಜಾಗೃತಿ ಮೂಡಿಸಬೇಕಿದೆ: ಆನೇಕಲ್ ನಾರಾಯಣಸ್ವಾಮಿ

ಬೆಂಗಳೂರು: ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತು ನೀಡಿರುವ ತೀರ್ಪು ರಾಜ್ಯ ಸರ್ಕಾರದ ಮಟ್ಟದಲ್ಲಿ ಅನುಷ್ಠಾನಗೊಳ್ಳುವವರೆಗೂ ಯಾವುದೇ ಹುದ್ದೆಗಳ ನೇಮಕಾತಿ ಆದೇಶ ಮತ್ತು ಈಗಾಗಲೇ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಮಾದಿಗ ಸಮುದಾಯ ಮತ್ತು ಒಳ ಪಂಗಡಗಳ ಸಮುದಾಯ ಒತ್ತಾಯಿಸಿದೆ.

ಬೆಂಗಳೂರಿನ ಗಾಂಧಿ ಭವನದಲ್ಲಿಂದು (ಆಗಸ್ಟ್ 19) ಮಾದಿಗ ಪೊಲಿಟಿಕಲ್ ಪೋರಂ, ಶೂದ್ರ ಪ್ರತಿಷ್ಠಾನವತಿಯಿಂದ ನಡೆದ ಐತಿಹಾಸಿಕವಾದ ಒಳ ಮೀಸಲಾತಿ ತೀರ್ಪು ಕುರಿತ ಒಂದು ಮುನ್ನೋಟ ಕುರಿತ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಒಳ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ನ ತೀರ್ಪುನಿಂದ ಅನೇಕ ಸಮಯದಾಯಗಳಿಗೆ ಸುದೀರ್ಘ ಹೋರಾಟದ ಜಯವಾಗಿದೆ, ಬೆಳಗಾವಿ ಮತ್ತು ಹುಬ್ಬಳಿಯಲ್ಲಿ ನಡೆದ ನಡೆದ ಬಹುದೊಡ್ಡ ಸಮಾವೇಶ, ಅನೇಕ ಮುಖಂಡರ ಹೋರಾಟದ ಪ್ರತಿಫಲವಾಗಿ ಒಳ ಮೀಸಲಾತಿ ಜಾರಿಗೆ ಕಾಲ ಕೂಡಿ ಬಂದಿದೆ ಇದರ ಜಾರಿಗಾಗಿ ಮಾದಿಗ ಸೇರಿದಂತೆ ಎಲ್ಲ ಸಮುದಾಯಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಇದರ ಜಾರಿಗೆ ನಾನೇ ನೇತೃತ್ವ ವಹಿಸುತ್ತೇನೆ ಎಂದು ಹೇಳಿದರು.

ಮಾಜಿ ಕೇಂದ್ರ ಸಚಿವ ಆನೇಕಲ್ ನಾರಾಯಣಸ್ವಾಮಿ ಮಾತನಾಡಿ, ಒಳ ಮೀಸಲಾತಿ ಕುರಿತಂತೆ ರಾಜ್ಯದ ಮಾದಿಗ ಸೇರಿದಂತೆ ಕೆಳ ಸಮುದಾಯಗಳಿಗೆ ಅರಿವು ಮೂಡಿಸುವ ಅಗತ್ಯವಾಗಿದೆ, ಇದುವರೆಗೂ ಒಳ ಮೀಸಲಾತಿ ಕುರಿತು ಬಹುತೇಕ ಜನರಿಗೆ ಸರಿಯಾದ ಅರಿವು ಇಲ್ಲ, ಒಳ ಮೀಸಲಾತಿ ತೀರ್ಪು ಕುರಿತು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಲಾಗುವುದು ಎಂದು ಹೇಳಿದರು.

ಒಳ ಮೀಸಲಾತಿ ಕುರಿತಂತೆ ಕೇಂದ್ರದ ಪ್ರಮುಖ ಮುಖಂಡರನ್ನು ಬೇಟಿಯಾಗಲು ತೆರಳಿದ ಸಂದರ್ಭದಲ್ಲಿ ನಮ್ಮ ಕುಳಿತು ಕೊಳ್ಳಲು ಕುರ್ಚಿ ಕೊಡದೇ ಅವಮಾನ ಮಾಡಿದರು,341ನೇ ವಿಧಿ ಇದಕ್ಕೆ ಸಂಬಂದಿಸುವುದಿಲ್ಲ ಎಂದು ಉತ್ತರ ನೀಡಿದರು ಇದನ್ನು ಸವಾಲಾಗಿ ಸ್ವೀಕರಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿ ಸೂಕ್ತ ನ್ಯಾಯ ಪಡೆದಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಧರ್ಮಸೇನಾ,ಒಳ ಮೀಸಲಾತಿ ಹೋರಾಟಗಾರರಾದ ಗಡಂ ವೆಂಕಟೇಶ್, ಪಿ.ಮೂರ್ತಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಗೋನಾಳ್ ಬೀಮಪ್ಪ, ಲಕ್ಷ್ಮೀ ನಾರಾಯಣಸ್ವಾಮಿ, ಆದಿ ಜಾಂಬವ ಸಮುದಾಯದ ಡಾ.ಬೀಮರಾಜು, ಸಿದ್ಧರಾಜು  ಮತ್ತಿತರರು ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago