ರಾಜ್ಯ

ಹಿರಿಯ ನಾಗರಿಕರಿಗೆ ಆಯುಷ್ಮಾನ್‌ ವಂದನ್‌ ಕಾರ್ಡ್‌: ದೇಶದಲ್ಲೇ ಕರ್ನಾಟಕ 6ನೇ ಸ್ಥಾನ

ಮಂಗಳೂರು: 70 ವರ್ಷ ಮೀರಿದ ಹಿರಿಯ ನಾಗರಿಕರಿಗೆ ಆಯುಷ್ಮಾನ್‌ ವಂದನ್‌ ಕಾರ್ಡ್‌ ನೋಂದಣಿಯಲ್ಲಿ ದೇಶದಲ್ಲಿಯೇ ಕರ್ನಾಟಕ ಆರನೇ ಸ್ಥಾನದಲ್ಲಿದೆ. ಇನ್ನು ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಹಾಗೂ ಕರಾವಳಿ ಜಿಲ್ಲೆಗಳು ಪ್ರಗತಿಯ ಕಡೆ ಸಾಗಿವೆ.

ವಯೋವೃದ್ಧರಿಗೆ ಮಾತ್ರ ಕಾರ್ಡ್‌ ನೋಂದಣಿ ಆಗುತ್ತಿದೆ. ಆದರೆ ಈ ಯೋಜನೆಯಿಂದ ಲಭ್ಯವಿರುವ ಸೇವೆಗಳು ಮಾತ್ರ ಇನ್ನು ದೂರದ ಮಾತಾಗಿವೆ.

ದೇಶದಲ್ಲಿ ಮಧ್ಯಪ್ರದೇಶ ರಾಜ್ಯ ಈ ಯೋಜನೆಯಲ್ಲಿ ಅತಿ ಹೆಚ್ಚು ಫಲಾನುಭವಿಗಳನ್ನು ಹೊಂದಿದೆ. ಇಲ್ಲಿ 10,01,497 ಮಂದಿ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಕೇರಳ 4,54,878 ಹಿರಿಯರು, ಉತ್ತರಪ್ರದೇಶ 4,23,232 ಮಂದಿ, ಗುಜರಾತ್‌ 2,93,234 ಮಂದಿ, ಬಿಹಾರದಲ್ಲಿ 1,19,234 ಮಂದಿ, ಕರ್ನಾಟಕದಲ್ಲಿ 86,803 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ.

ನೋಂದಣಿ ಪ್ರಮಾಣ ತೀರಾ ಕಡಿಮೆ ಇರುವ ರಾಜ್ಯಗಳು ನಾಗಾಲ್ಯಾಂಡ್‌ 138 ಮಂದಿ, ಮೇಘಾಲಯ 56 ಮಂದಿ, ಮತ್ತು ಮಿಜೋರಾಂ 48 ಮಂದಿ ಹಿರಿಯರು ಇದ್ದಾರೆ.

ಈ ಯೋಜನೆಯಲ್ಲಿ ಬಿಪಿಎಲ್‌ ಕಾರ್ಡ್‌ದಾರರಿಗೆ ಚಿಕಿತ್ಸೆ ಸಂಪೂರ್ಣ ಉಚಿತವಿದ್ದು, ಎಪಿಎಲ್‌ ಕಾರ್ಡ್‌ದಾರರಿಗೆ ಶೇ.30ರಷ್ಟು ಮಾತ್ರ ಸರ್ಕಾರ ಭರಿಸುತ್ತದೆ. ಉಳಿದಂತೆ ಇನ್ನು ಶೇ.70 ರಷ್ಟನ್ನು ರೋಗಿಗಳೇ ಪಾವತಿ ಮಾಡಬೇಕು.

ಈ ಯೋಜನೆಯಲ್ಲಿರುವ ಚಿಕಿತ್ಸೆ ಸೌಲಭ್ಯ:
ಭಾರತ್‌ 2023 ಆರೋಗ್ಯ ಯೋಜನೆ (ಎಬಿಪಿಎಂಜೆಎವೈ)ಯನ್ನು ಆಯುಷ್ಮಾನ ಭಾರತ್‌ ಮಂತ್ರಿ ಕರ್ನಾಟಕ ಟ್ರಸ್ಟ್‌ ಅಡಿಯಲ್ಲಿ ವೇದಿಕೆ ಕಲ್ಪಿಸಲಾಗಿದೆ.

2024ರ ಅ.29ರಿಂದ 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗೂ ಈ ಯೋಜನೆ ವಿಸ್ತರಿಸಲಾಗಿದೆ. ಇದರಲ್ಲಿ ಮುಖ್ಯವಾಗಿ ಆಂಜಿಯೋಪ್ಲಾಸ್ಟಿ, ಹಿಪ್‌ ರಿಪ್ಲೇಶ್‌ ಮೆಂಟ್‌, ಗ್ಯಾಲ್‌ ಬ್ಲ್ಯಾಡ್ ತೆಗೆದಿರುವುದು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಹೀಮೋ ಡಯಾಲಿಸಿಸ್‌, ಎಂಟರಿಕ್‌ ಫಿವರ್‌ ಇನ್ನಿತರ ಕಾಯಿಲೆ ಸಮಸ್ಯೆಗಳಿಗೆ ಈ ಕಾರ್ಡ್‌ ಬಳಸಿ ಚಿಕಿತ್ಸೆ ಪಡೆಯಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

28 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

57 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

1 hour ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago