ಮಂಗಳೂರು: 70 ವರ್ಷ ಮೀರಿದ ಹಿರಿಯ ನಾಗರಿಕರಿಗೆ ಆಯುಷ್ಮಾನ್ ವಂದನ್ ಕಾರ್ಡ್ ನೋಂದಣಿಯಲ್ಲಿ ದೇಶದಲ್ಲಿಯೇ ಕರ್ನಾಟಕ ಆರನೇ ಸ್ಥಾನದಲ್ಲಿದೆ. ಇನ್ನು ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಹಾಗೂ ಕರಾವಳಿ ಜಿಲ್ಲೆಗಳು ಪ್ರಗತಿಯ ಕಡೆ ಸಾಗಿವೆ.
ವಯೋವೃದ್ಧರಿಗೆ ಮಾತ್ರ ಕಾರ್ಡ್ ನೋಂದಣಿ ಆಗುತ್ತಿದೆ. ಆದರೆ ಈ ಯೋಜನೆಯಿಂದ ಲಭ್ಯವಿರುವ ಸೇವೆಗಳು ಮಾತ್ರ ಇನ್ನು ದೂರದ ಮಾತಾಗಿವೆ.
ದೇಶದಲ್ಲಿ ಮಧ್ಯಪ್ರದೇಶ ರಾಜ್ಯ ಈ ಯೋಜನೆಯಲ್ಲಿ ಅತಿ ಹೆಚ್ಚು ಫಲಾನುಭವಿಗಳನ್ನು ಹೊಂದಿದೆ. ಇಲ್ಲಿ 10,01,497 ಮಂದಿ ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಕೇರಳ 4,54,878 ಹಿರಿಯರು, ಉತ್ತರಪ್ರದೇಶ 4,23,232 ಮಂದಿ, ಗುಜರಾತ್ 2,93,234 ಮಂದಿ, ಬಿಹಾರದಲ್ಲಿ 1,19,234 ಮಂದಿ, ಕರ್ನಾಟಕದಲ್ಲಿ 86,803 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ.
ನೋಂದಣಿ ಪ್ರಮಾಣ ತೀರಾ ಕಡಿಮೆ ಇರುವ ರಾಜ್ಯಗಳು ನಾಗಾಲ್ಯಾಂಡ್ 138 ಮಂದಿ, ಮೇಘಾಲಯ 56 ಮಂದಿ, ಮತ್ತು ಮಿಜೋರಾಂ 48 ಮಂದಿ ಹಿರಿಯರು ಇದ್ದಾರೆ.
ಈ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಚಿಕಿತ್ಸೆ ಸಂಪೂರ್ಣ ಉಚಿತವಿದ್ದು, ಎಪಿಎಲ್ ಕಾರ್ಡ್ದಾರರಿಗೆ ಶೇ.30ರಷ್ಟು ಮಾತ್ರ ಸರ್ಕಾರ ಭರಿಸುತ್ತದೆ. ಉಳಿದಂತೆ ಇನ್ನು ಶೇ.70 ರಷ್ಟನ್ನು ರೋಗಿಗಳೇ ಪಾವತಿ ಮಾಡಬೇಕು.
ಈ ಯೋಜನೆಯಲ್ಲಿರುವ ಚಿಕಿತ್ಸೆ ಸೌಲಭ್ಯ:
ಭಾರತ್ 2023 ಆರೋಗ್ಯ ಯೋಜನೆ (ಎಬಿಪಿಎಂಜೆಎವೈ)ಯನ್ನು ಆಯುಷ್ಮಾನ ಭಾರತ್ ಮಂತ್ರಿ ಕರ್ನಾಟಕ ಟ್ರಸ್ಟ್ ಅಡಿಯಲ್ಲಿ ವೇದಿಕೆ ಕಲ್ಪಿಸಲಾಗಿದೆ.
2024ರ ಅ.29ರಿಂದ 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗೂ ಈ ಯೋಜನೆ ವಿಸ್ತರಿಸಲಾಗಿದೆ. ಇದರಲ್ಲಿ ಮುಖ್ಯವಾಗಿ ಆಂಜಿಯೋಪ್ಲಾಸ್ಟಿ, ಹಿಪ್ ರಿಪ್ಲೇಶ್ ಮೆಂಟ್, ಗ್ಯಾಲ್ ಬ್ಲ್ಯಾಡ್ ತೆಗೆದಿರುವುದು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಹೀಮೋ ಡಯಾಲಿಸಿಸ್, ಎಂಟರಿಕ್ ಫಿವರ್ ಇನ್ನಿತರ ಕಾಯಿಲೆ ಸಮಸ್ಯೆಗಳಿಗೆ ಈ ಕಾರ್ಡ್ ಬಳಸಿ ಚಿಕಿತ್ಸೆ ಪಡೆಯಬಹುದಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…