ಬೆಂಗಳೂರು : ಶಾಲಾ ಮಕ್ಕಳಿಗೆ ಅಜೀಮ್ ಪ್ರೇಮ್ ಜೀ ಪ್ರತಿಷ್ಠಾನದಿಂದ ವಾರದಲ್ಲಿ ೪ ಸಲ ಮೊಟ್ಟೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಜೀಮ್ ಪ್ರೇಮ್ ಜೀ ಪ್ರತಿಷ್ಠಾನವು ಮೊಟ್ಟೆ ಒದಗಿಸಲಿದೆ. ವಾರದಲ್ಲಿ ೪ ದಿನಗಳ ಕಾಲ ಪ್ರತಿಯೊಬ್ಬ ವಿದ್ಯಾರ್ಥಿಗೆ ತಲಾ ಒಂದು ಮೊಟ್ಟೆ ವಿತರಿಸಲಿದೆ ಎಂದು ತಿಳಿಸಿದರು.
ಅಲ್ಲದೆ ಮೊಟ್ಟೆ ವಿತರಿಸುವ ಯೋಜನೆ ಎಂದಿನಿಂದ ಆರಂಭವಾಗಲಿದೆ ಅಂತ ಬಹಿರಂಗ ಪಡಿಸಲಿಲ್ಲ. ಅಜೀಮ್ ಪ್ರೇಮ್ ಜಿ ಹೇಳಿದ್ದಾರೆಂದರೆ ಅದು ಬೇಗ ಶುರುವಾಗುವುದರಲ್ಲಿ ಅನುಮಾನವಿಲ್ಲ. ಇದು ನಿಜಕ್ಕೂ ಬಹುದೊಡ್ಡ ಕೊಡುಗೆ ಅನಿಸಲಿದೆ. ಸರ್ಕಾರಿ ಶಾಲೆಯಲ್ಲಿ ಓದುವ ಲಕ್ಷಾಂತರ ಮಕ್ಕಳು ಪೌಷ್ಠಿಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ವಾರದಲ್ಲಿ ೪ ಮೊಟ್ಟೆ ನಿಸ್ಸಂದೇಹವಾಗಿ ಅವರ ದೇಹಕ್ಕೆ ಬೇಕಿರುವ ಪೌಷ್ಠಿಕಾಂಶ ಒದಗಿಸಲಿದೆ ಎಂದು ಹೇಳಿದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…