ಬೆಂಗಳೂರು : ಶಾಲಾ ಮಕ್ಕಳಿಗೆ ಅಜೀಮ್ ಪ್ರೇಮ್ ಜೀ ಪ್ರತಿಷ್ಠಾನದಿಂದ ವಾರದಲ್ಲಿ ೪ ಸಲ ಮೊಟ್ಟೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಜೀಮ್ ಪ್ರೇಮ್ ಜೀ ಪ್ರತಿಷ್ಠಾನವು ಮೊಟ್ಟೆ ಒದಗಿಸಲಿದೆ. ವಾರದಲ್ಲಿ ೪ ದಿನಗಳ ಕಾಲ ಪ್ರತಿಯೊಬ್ಬ ವಿದ್ಯಾರ್ಥಿಗೆ ತಲಾ ಒಂದು ಮೊಟ್ಟೆ ವಿತರಿಸಲಿದೆ ಎಂದು ತಿಳಿಸಿದರು.
ಅಲ್ಲದೆ ಮೊಟ್ಟೆ ವಿತರಿಸುವ ಯೋಜನೆ ಎಂದಿನಿಂದ ಆರಂಭವಾಗಲಿದೆ ಅಂತ ಬಹಿರಂಗ ಪಡಿಸಲಿಲ್ಲ. ಅಜೀಮ್ ಪ್ರೇಮ್ ಜಿ ಹೇಳಿದ್ದಾರೆಂದರೆ ಅದು ಬೇಗ ಶುರುವಾಗುವುದರಲ್ಲಿ ಅನುಮಾನವಿಲ್ಲ. ಇದು ನಿಜಕ್ಕೂ ಬಹುದೊಡ್ಡ ಕೊಡುಗೆ ಅನಿಸಲಿದೆ. ಸರ್ಕಾರಿ ಶಾಲೆಯಲ್ಲಿ ಓದುವ ಲಕ್ಷಾಂತರ ಮಕ್ಕಳು ಪೌಷ್ಠಿಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ವಾರದಲ್ಲಿ ೪ ಮೊಟ್ಟೆ ನಿಸ್ಸಂದೇಹವಾಗಿ ಅವರ ದೇಹಕ್ಕೆ ಬೇಕಿರುವ ಪೌಷ್ಠಿಕಾಂಶ ಒದಗಿಸಲಿದೆ ಎಂದು ಹೇಳಿದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…