ರಾಜ್ಯ

ಅಳಿಯನ ಆತ್ಮಹತ್ಯೆ ಬಗ್ಗೆ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದ್ದಿಷ್ಟು

ದಾವಣಗೆರೆ: ಅಳಿಯನ ಸಾವಿನ ಬಳಿಕ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಹೇಳಿಕೆ ನೀಡಿದ್ದು, ಮಕ್ಕಳಿಲ್ಲದ ಕೊರಗಿತ್ತು ಜೊತೆಗೆ ಕುಡಿತದ ಚಟವಿತ್ತು ಎಂದಿದ್ದಾರೆ.

ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅಳಿಯ ಕೆ.ಜಿ ಪ್ರತಾಪ್‌ ಕುಮಾರ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.

ಅಳಿಯನ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅವರು, ೨೦೦೮ರಲ್ಲಿ ನನ್ನ ಪುತ್ರಿ ಜೊತೆ ಪ್ರತಾಪ್‌ ಕುಮಾರ್‌ ವಿವಾಹವಾಗಿತ್ತು. ನನ್ನ ವ್ಯವಹಾರ, ರಾಜಕೀಯ ಸೇರಿದಂತೆ ಎಲ್ಲವನ್ನೂ ಪ್ರತಾಪ್‌ ಮನೆ ಮಗನ ರೀತಿಯಲ್ಲಿ ನೋಡಿಕೊಳ್ಳುತ್ತಿದ್ದ. ಮದುವೆಯಾಗಿ ೧೬ ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ ಎಂಬ ಕೊರಗು ಇತ್ತು.

ಈ ಹಿನ್ನೆಲೆಯಲ್ಲಿ ಸೆರೋಗಸಿ ಮೂಲಕ ಮಗು ಪಡೆಯಲು ಕೋರ್ಟ್‌ ಅನುಮತಿಯನ್ನು ಕೇಳಿದ್ದೆವು. ಕೋರ್ಟ್‌ ಅನುಮತಿ ನೀಡುವುದರಲ್ಲಿತ್ತು. ಪ್ರತಾಪ್‌ ಕುಮಾರ್‌ ಹೆಚ್ಚಾಗಿ ಮದ್ಯಪಾನ ಮಾಡುತ್ತಿದ್ದರು. ಇದರಿಂದಾಗಿ ಅವರ ಲಿವರ್‌ ಕಿಡ್ನಿ ಸಮಸ್ಯೆ ಕಾಡಿತ್ತು. ಆಸ್ಪತ್ರೆಯಲ್ಲಿ ಚೇತರಿಕೆ ಕಂಡ ಬಳಿಕ ಅವರು ಹುಟ್ಟೂರು ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮಕ್ಕೆ ಹೋಗಿದ್ದರು.

ಆದರೆ ಇಂದು ಮಧ್ಯಾಹ್ನದ ವೇಳೆಗೆ ಮೆಕ್ಕೆಜೋಳಗಳಿಗೆ ಹಾಕುವ ಕ್ರಿಮಿನಾಶಕ ಮಾತ್ರೆಗಳನ್ನು ಸೇವಿಸಿದ್ದಾರೆಂದು ಅವರ ಸಹೋದರ ಪ್ರಭುದೇವ ನನಗೆ ಕರೆ ಮಾಡಿದ್ದರು. ನಂತರ ಪ್ರತಾಪ್‌ ಕುಮಾರ್‌ ಅವರ ಹುಡುಕಾಟದಲ್ಲಿ ತೊಡಗಿದ್ದೆವು. ದಾವಣಗೆರೆ ಮತ್ತು ಶಿವಮೊಗ್ಗ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದೆವು. ಹೊನ್ನಾಳಿ ಸಮೀಪದ ಏರಿಯಾದಲ್ಲಿ ಅವರ ಮೊಬೈಲ್‌ ಆನ್‌ ಆಗಿತ್ತು.

ಕರೆ ಮಾಡಿದಾಗ ವಿಷ ಸೇವಿಸಿದ್ದ ಬಗ್ಗೆ ನಮಗೆ ಮಾಹಿತಿ ನೀಡಿದ್ದರು. ತಕ್ಷಣವೇ ಅವರನ್ನು ಹೊನ್ನಾಳಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ದಾವಣಗೆರೆ ಆಸ್ಪತ್ರೆಗೆ ಕಳಿಸಲು ಯೋಜಿಸಿದ್ದೆವು. ಆದರೆ ಮಾರ್ಗಮಧ್ಯೆ ಪ್ರತಾಪ್ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಸಾಕಷ್ಟು ನೋವು ಸಂಕಟ ಆಗುತ್ತಿದೆ. ನಾಳೆ ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮಾಹಿತಿ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

3 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

3 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

3 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

3 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

3 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago