ರಾಜ್ಯ

ಪಕ್ಷದಲ್ಲಿ ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು: ಬಿ.ಕೆ.ಹರಿಪ್ರಸಾದ್‌

ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಸಚಿವ ಸ್ಥಾನಗಳ ಬದಲಾವಣೆ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸಬೇಕು. ಆದರೆ ಪಕ್ಷದ ಹೈಕಮಾಂಡ್‌ ಕಲಬುರಗಯಲ್ಲೇ ಇರುವುದರಿಂದ ಎಲ್ಲವನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಇಂದು(ಫೆಬ್ರವರಿ.16) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ಇಲ್ಲಿಯವರೇ ಆಗಿರುವುದರಿಂದ ಎಲ್ಲವೂ ಅವರಿಗೆ ಮಾತ್ರ ಗೊತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ರೀತಿಯ ಚರ್ಚೆಗಳು ನಡೆಯುತ್ತಲೇ ಇವೆ. ಈ ಎಲ್ಲಾ ವಿಚಾರಗಳು ರಾಜಕೀಯದಲ್ಲಿ ಸಹಜ. ಆದರೆ ಸ್ವಾಮೀಜಿಗಳು ಎನಿಸಿಕೊಂಡಿರುವವರು ರಾಜಕೀಯ ಮಾತನಾಡಬಾದು. ಅದರಲ್ಲೂ ನನ್ನ ವಿಚಾರದಲ್ಲಿ ಯಾವ ಶ್ರೀಗಳು ಕೂಡ ಮಾತಾಡಬಾರದು ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ವಿಜಯಪುರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ ವ್ಯಕ್ತಿ ಆರ್‌ಎಸ್‌ಎಸ್‌ಗೆ ಸೇರಿದವನು

ವಿಜಯಪುರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ ವ್ಯಕ್ತಿ ಆರ್‌ಎಸ್‌ಎಸ್‌ಗೆ ಸೇರಿದವನು ಎಂಬುದು ಎಲ್ಲಇಗೂ ಗೊತ್ತಿದೆ. ಅವರೇ ಕೆಲ ಕಡೆಗಳಲ್ಲಿ ಬುರ್ಖಾ ಧರಸಿ ಗಲಭೆ ಮಾಡುತ್ತಾರೆ. ಆರ್‌ಎಸ್‌ಎಸ್‌ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಪಿತೃ ಪಕ್ಷ ಆಚರಣೆ ಹೆಸರಿನಲ್ಲಿ ಹೀಗೆಲ್ಲಾ ಮಾಡುತ್ತಾರೆ. ಅಲ್ಲದೇ ಮಾದರಿಯ ಚಿಂತನೆಗಳನ್ನು ಅನುಷ್ಠಾನಕ್ಕೆ ತರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಅದು ಸಾಧ್ಯವಿಲ್ಲ. ಶಾಂತಿ ಕದಡುವ ಪ್ರಯತ್ನ ಅವರೇ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಯ ಗಲಭೆ ಕುರಿತು ಮಾತನಾಡಿದ ಅವರು, ಈ ಗಲಭೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕೃಪಾಪೋಷಿತ ಕೃತ್ಯವಾಗಿದೆ. ನಮ್ಮ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟ ಎನ್ನಲಾಗುತ್ತದೆ. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಆ ಶಾಂತಿಯನ್ನು ಕದಡಲು ಬಹಳ ಪ್ರಯತ್ನ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.

ಇನ್ನು ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣದಲ್ಲಿ ಶೇ.90ರಷ್ಟು ಎರಡೇ ತಿಂಗಳಲ್ಲಿ ಕಡಿಮೆಯಾಗಿದೆ. ಯಾರೇ ಆಗಲಿ, ಯಾವುದೇ ಧರ್ಮ, ಜಾತಿ, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಯತ್ನಕ್ಕೆ ಕೈ ಹಾಕಿದರೆ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯದ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

21 seconds ago

ಮಳೆ ಕೊರತೆ ನಡುವೆಯೂ ತರಕಾರಿ ಅಗ್ಗ

ದಿನೇಶ್ ಕುಮಾರ್ ಎಚ್.ಎಸ್. ಮೈಸೂರು: ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಡುವೆಯೂ ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಪಾತಾಳಕ್ಕಿಳಿದಿದೆ. ಕಳೆದ…

6 mins ago

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago