ರಾಜ್ಯ

ಆರ್‌ಎಸ್‌ಎಸ್‌, ಬಿಜೆಪಿಯವರು ಸಂವಿಧಾನದ ವಿರೋಧಿಗಳು: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಭಾರತದ ಸಂವಿಧಾನ, ಡಾ. ಬಿ.ಆರ್‌. ಅಂಬೇಡ್ಕರ್‌ ಅವರನ್ನು ಎಂದಿಗೂ ಒಪ್ಪುವುದಿಲ್ಲ. ಅವರು ಸಂವಿಧಾನ ವಿರೋಧಿಗಳು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಸಂವಿಧಾನ ಹಾಗೂ ತ್ರಿವರ್ಣ ಧ್ವಜವನ್ನು ಗೌರವಿಸದೇ ಇರುವವರೇ ಭಾರತ ದೇಶದ ನಿಜವಾದ ತಾಲಿಬಾನ್‌ಗಳು ಎಂದು ಕಿಡಿಕಾರಿದರು.

ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಬಗ್ಗೆ ಅಮಿತ್‌ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಎಲ್ಲ ವಿಚಾರದಲ್ಲೂ ಅಂಬೇಡ್ಕರ್‌ ಬಗ್ಗೆ ಹೇಳಿಕೆ ನೀಡುವುದು ಬಿಜೆಪಿಯವರಿಗೆ ಫ್ಯಾಷನ್‌ ಆಗಿದೆ. ಈ ರೀತಿ ಹೇಳಿಕೆ ನೀಡುವುದರಿಂದ ಆರ್‌ಎಸ್ಎಸ್‌ ಹಾಗೂ ಬಿಜೆಪಿಯವರು ಸಂವಿಧಾನ ಹಾಗೂ ಅಂಬೇಡ್ಕರ್‌ರವರ
ವಿರೋಧಿಗಳು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಇನ್ನೂ ಭಾಗವತ್‌ ಯಾರು? ಅವರು ಯಾವ ಸಂವಿಧಾನದ ಹುದ್ದೆ ನಿಭಾಯಿಸಿದ್ದಾರೆ? ಎಂದು ಪ್ರಶ್ನಿಸಿದರು.

ಇನ್ನೂ ಆರ್‌ಎಸ್‌ಎಸ್‌ ಎಲ್ಲಿಯೂ ನೋಂದಣಿ ಆಗಿಲ್ಲ. ಆದರೆ ಇವರು ದೇಶದ ಬೇರೆ ಬೇರೆ ಭಾಗಗಳಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ್ದು, ನಮ್ಮ ತೆರಿಗೆ ಹಣದಲ್ಲಿ ಅವರಿಗೆ ಝಡ್‌ಪ್ಲಸ್‌ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅಲ್ಲದೇ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್‌ ಶಾ ಹಾಗೂ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಎಂದಿಗೂ ಎಂದಿಗೂ ರಾಷ್ಟ್ರಧ್ವಜ
ಒಪ್ಪಿಲ್ಲ. ಹೀಗಾಗಿ ಯಾರು ಭಾರತದ ಸಂವಿಧಾನ ಒಪ್ಪುವುದಿಲ್ಲವೋ ಅವರೆಲ್ಲಾ ತಾಲಿಬಾನಿಗಳು. ಭಾರತ ದೇಶದಲ್ಲಿ ಸಂವಿಧಾನ ಇರುವವರೆಗೂ ದೇಶ ಒಂದಾಗಿರುತ್ತೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

3 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

4 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

4 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

4 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

5 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

5 hours ago