ರಾಜ್ಯ

ಬೆಸ್ಕಾಂನಿಂದ ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್‌ ಲೋಕಾರ್ಪಣೆ

ಬಿ.ಎಲ್.ಡಿ.ಸಿ. ಫ್ಯಾನ್ ಬಳಸಿ, ವಿದ್ಯುತ್ ಜತೆ ಹಣವೂ ಉಳಿಸಿ: ಬೆಸ್ಕಾಂ ಎಂಡಿ ಶಿವಶಂಕರ್‌

ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್‌ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ.

ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮದ ಭಾಗವಾಗಿ ಬೆಸ್ಕಾಂನ ಬೇಡಿಕೆ ನಿರ್ವಹಣಾ ವಿಭಾಗದ (ಡಿಎಸ್‌ಎಂ) ವತಿಯಿಂದ ಗುರುವಾರ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಅನ್ನು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ “ಬೇಸಿಗೆ ಆರಂಭದಲ್ಲೇ ಬಿ.ಎಲ್‌.ಡಿ.ಸಿ. ಫ್ಯಾನ್‌ಗಳನ್ನು ಬಿಡುಗಡೆ ಮಾಡಿ, ಬಳಕೆಗೆ ಗ್ರಾಹಕರನ್ನು ಉತ್ತೇಜಿಸಲಾಗುತ್ತಿದೆ. ಸಾಮಾನ್ಯ ಫ್ಯಾನ್‌ಗಳಿಗಿಂತ ಅತಿ ಕಡಿಮೆ ವಿದ್ಯುತ್ ಬಳಸಿಕೊಳ್ಳುವಂತೆ ಈ ಫ್ಯಾನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆ ವಿದ್ಯುತ್ ಬೇಡಿಕೆ ಕಡಿತಗೊಳಿಸುವ ನಮ್ಮ ಈ ಪ್ರಯತ್ನ ಗ್ರಾಹಕರ ವಿದ್ಯುತ್ ವೆಚ್ಚವನ್ನೂ ಕಡಿಮೆ ಮಾಡಲಿದೆ. ಸುಸ್ಥಿರ ಹಾಗೂ ಇಂಧನ ದಕ್ಷತೆಯ ಭವಿಷ್ಯಕ್ಕೆ ಇದು ಮಹತ್ವದ ಹೆಜ್ಜೆಯಾಗಿದೆ,” ಎಂದು ಹೇಳಿದರು.

“ಇಂಧನ ದಕ್ಷತೆಯೆಡೆಗಿನ ನಮ್ಮ ಪ್ರಯತ್ನವು ಪಾಲುದಾರರ ಸಹಕಾರವಿಲ್ಲದೇ ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ಬಿಇಇ, ಕ್ರೆಡಲ್, ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್‌ಸಿ) ಹಾಗೂ ಇನ್ನಿತರ ಪಾಲುದಾರರ ಪ್ರೋತ್ಸಾಹಕ್ಕೆ ಧನ್ಯವಾದ. ವಿದ್ಯುತ್ ಬಳಕೆಯಲ್ಲಿ ಜಾಗೃತಿ ಹಾಗೂ ಸುಸ್ಥಿರ ನಾಳೆಗಾಗಿ, ನಾವು ಒಂದಾಗಿ ನಡೆಯಬೇಕಿದೆ,” ಎಂದು ಡಾ. ಎನ್‌. ಶಿವಶಂಕರ್‌ ಕರೆ ನೀಡಿದರು.

ಕ್ರೆಡಲ್ ವ್ಯವಸ್ಥಾಪಕ ನಿರ್ದೆಶಕ ಕೆ.ಪಿ.ರುದ್ರಪ್ಪಯ್ಯ ಮಾತನಾಡಿ, “ಒಂದು ಯೂನಿಟ್ ವಿದ್ಯುತ್‌ ಉಳಿಸಿದರೆ, ಎರಡು ಯೂನಿಟ್ ವಿದ್ಯುತ್‌ ಉತ್ಪಾದಿಸಿದಂತೆ. ವಿದ್ಯುತ್ ಉತ್ಪಾದನೆ ಎಷ್ಟು ಮುಖ್ಯವೋ, ಅದನ್ನು ಸಂರಕ್ಷಿಸುವುದೂ ಅಷ್ಟೇ ಮುಖ್ಯವಾಗುತ್ತದೆ. ದೇಶದಲ್ಲಿ ಮೊದಲ ಬಾರಿಗೆ ವಿದ್ಯುತ್ ಸಂರಕ್ಷಣೆ ಮತ್ತು ದಕ್ಷತೆ ನೀತಿ-2022-27 ಜಾರಿಗೊಳಿಸಿದ ಹೆಮ್ಮೆ ಕರ್ನಾಟಕದ್ದು . ಈ ನೀತಿಯು 744 ಬಿಲಿಯನ್ ಕಿಲೋ ವ್ಯಾಟ್ ಅವರ್ ವಿದ್ಯುತ್ ಉಳಿತಾಯ ಜತೆಗೆ 6 ಲಕ್ಷ ಟನ್ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆ ತಡೆಯುವ ಗುರಿ ಹೊಂದಿದೆ,” ಎಂದು ತಿಳಿಸಿದರು.

“ಇಂಧನ ದಕ್ಷತೆ ಹಾಗೂ ಸಂರಕ್ಷಣೆಯ ಗುರಿ ತಲುಪಲು ವಿವಿಧ ವಲಯಗಳಿಗೆ ಗುರಿಗಳನ್ನು ನೀಡಲಾಗಿತ್ತು. ಈ ನಿಟ್ಟಿನಲ್ಲಿ ಬೆಸ್ಕಾಂ ಸಾಧನೆ ಮಹತ್ವದ್ದಾಗಿದೆ. ಬಿ.ಎಲ್‍.‍‍‍ಡಿ.ಸಿ. ಫ್ಯಾನ್‌ಗಳ ಬಳಕೆ ಹೆಚ್ಚಬೇಕಿದ್ದು, ವಿದ್ಯುತ್ ಉಳಿತಾಯ ಪ್ರಯತ್ನಗಳು ನಮ್ಮಿಂದಲೇ ಆರಂಭವಾಗಲಿ,” ಎಂದರು.

ಪಿ.ಡ್ಲ್ಯೂ.ಸಿ. ಭಾರತದ ಕ್ಲೀನ್ ಎನರ್ಜಿ ವಿಭಾಗದ ಮುಖ್ಯಸ್ಥರಾದ ರಾಜೀವ್ ರಲ್ಹಾನ್ ಮಾತನಾಡಿ, ” ಸದ್ಯ ಬಳಕೆಯಲ್ಲಿರುವ ಹಳೆಯ ತಂತ್ರಜ್ಞಾನದ ಫ್ಯಾನ್‌ಗಳಿಗೆ ಹೋಲಿಸಿದರೆ ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆಯಿಂದ ಶೇಕಡ 50ರಷ್ಟು ವಿದ್ಯುತ್ ಬಳಕೆ ಕಡಿಮೆಗೊಳಿಸಬಹುದಾಗಿದೆ. ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆ ಉತ್ತೇಜಿಸುತ್ತಿರುವ ಸರ್ಕಾರದ ಜತೆ ಸಹಕರಿಸಲು ಹೆಮ್ಮೆಯಾಗುತ್ತಿದೆ,” ಎಂದು ಹೇಳಿದರು.

ಇಇಎಸ್‌ಎಲ್ ರಾಜ್ಯ ಮುಖ್ಯಸ್ಥರಾದ ದೀಪಕ್ ಸಹನಿ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್‌.ಜೆ. ರಮೇಶ್‌, ಬೆಸ್ಕಾಂ ಡಿಎಸ್‌ಎಂ ಪ್ರಧಾನ ವ್ಯವಸ್ಥಾಪಕರಾದ ರಮೇಶ್ ವಿ.ಎಸ್., ಪಿಎಂಎಸ್ ನಿರ್ದೇಶಕರಾದ ಅಮೇಯ ಸುಬೋಧ್ ಉದ್ಘಾಂವ್ಕರ್ ಸೇರಿದಂತೆ ಬೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಬಿ.ಎಲ್‌.ಡಿ.ಸಿ. ಸೀಲಿಗ್‌ ಫ್ಯಾನ್‌ ಖರೀದಿ ಹೇಗೆ?
ಹೆಚ್ಎಸ್ಆರ್‌ ಲೇಔಟ್‌ನಲ್ಲಿರುವ ಬೆಸ್ಕಾಂನ ಸೆಂಟರ್ ಆಫ್ ಎಕ್ಸಲೆನ್ಸ್ ಕಚೇರಿ ಮತ್ತು ಬೆಸ್ಕಾಂ ಅಧಿಕೃತ ಜಾಲತಾಣದಲ್ಲಿನ ಇಇಎಸ್‌ಎಲ್‌ ಲಿಂಕ್ (https://eeslmart.in/fan?affiliateid=13285)
(website link: eeslmart.in) ಮೇಲೆ ಕ್ಲಿಕ್ ಮಾಡುವುದರ ಮೂಲಕ ಆನ್‌ಲೈನ್‌ನಲ್ಲಿ ಫ್ಯಾನ್ ಖರೀದಿಸಬಹುದಾಗಿದೆ. 5 ಸ್ಟಾರ್ ಪ್ರಮಾಣೀಕೃತ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಬೆಲೆ 2,699 ರೂ. ಇದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

9 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

10 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

10 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

11 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

15 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

19 hours ago