ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಇಂದು ಯೋಜನೆ, ಕಾರ್ಯಕ್ರಮ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿನಾಥ ಅಧಿಸೂಚನೆ ಹೊರಡಿಸಿದ್ದು, ಬಿ.ಆರ್.ಪಾಟೀಲ್ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ಎಲ್ಲಾ ಇತರೆ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಬಿ.ಆರ್.ಪಾಟೀಲ್ ಅವರನ್ನು ಮುಖ್ಯಮಂತ್ರಿ ಸಲಹೆಗಾರನನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಅವರು ಇತ್ತೀಚೆಗೆ ಆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ನೀಡಿದ ಬಳಿಕ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದ ಬಿ.ಆರ್.ಪಾಟೀಲ್, ನನ್ನ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ. ಅಧಿಕಾರಿಗಳು ಕೂಡ ಸರಿಯಾಗಿ ನನ್ನ ಮಾತನ್ನು ಕೇಳುತ್ತಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದು ಸರ್ಕಾರದ ಕಾರ್ಯವೈಖರಿಯ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…