ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ಸಂಭ್ರಮದಲ್ಲಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ನವ ದಂಪತಿಗೆ ಶುಭ ಹಾರೈಸಿದ್ದಾರೆ.
ಮಾರ್ಚ್.5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರಿನ ಕನಕಪುರ ರೆಸಾರ್ಟ್ನಲ್ಲಿ ನಡೆದಿತ್ತು. ಅವರ ವಿವಾಹಕ್ಕೆ ಕುಟುಂಬ ಸದಸ್ಯರು, ಆಪ್ತ ವಲಯದ ಸ್ನೇಹಿತರು ಹಾಗೂ ರಾಜಕೀಯ ಗಣ್ಯರು ಸಾಕ್ಷಿಯಾಗಿದ್ದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಮಾರ್ಚ್.9) ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಅವರ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿ ನವದಂಪತಿಗೆ ಶುಭ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿ.ವೈ.ವಿಜಯೇಂದ್ರ ಅವರು, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ನೂತನ ದಾಂಪತ್ಯಕ್ಕೆ ಅಡಿಯಿಟ್ಟ ಸಂದರ್ಭದ ಕಾರ್ಯಕ್ರಮದಲ್ಲಿ ಸಂಘಟನೆಯ ಹಿರಿಯ ಮಾರ್ಗದರ್ಶಕರೂ ಆದ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ಜೀ ಅವರೊಂದಿಗೆ ಜೊತೆಗೂಡಿ ನೂತನ ವಧು ವರರನ್ನು ಹಾರೈಸಲಾಯಿತು. ಈ ಸಂದರ್ಭದಲ್ಲಿ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪ ಅವರು, ಸಂಸದ ಬಿ.ವೈ.ರಾಘವೇಂದ್ರ ಅವರು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…