ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ಸಂಭ್ರಮದಲ್ಲಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬ ನವ ದಂಪತಿಗೆ ಶುಭ ಹಾರೈಸಿದ್ದಾರೆ.
ಮಾರ್ಚ್.5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರಿನ ಕನಕಪುರ ರೆಸಾರ್ಟ್ನಲ್ಲಿ ನಡೆದಿತ್ತು. ಅವರ ವಿವಾಹಕ್ಕೆ ಕುಟುಂಬ ಸದಸ್ಯರು, ಆಪ್ತ ವಲಯದ ಸ್ನೇಹಿತರು ಹಾಗೂ ರಾಜಕೀಯ ಗಣ್ಯರು ಸಾಕ್ಷಿಯಾಗಿದ್ದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಮಾರ್ಚ್.9) ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಅವರ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿ ನವದಂಪತಿಗೆ ಶುಭ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿ.ವೈ.ವಿಜಯೇಂದ್ರ ಅವರು, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ನೂತನ ದಾಂಪತ್ಯಕ್ಕೆ ಅಡಿಯಿಟ್ಟ ಸಂದರ್ಭದ ಕಾರ್ಯಕ್ರಮದಲ್ಲಿ ಸಂಘಟನೆಯ ಹಿರಿಯ ಮಾರ್ಗದರ್ಶಕರೂ ಆದ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ಜೀ ಅವರೊಂದಿಗೆ ಜೊತೆಗೂಡಿ ನೂತನ ವಧು ವರರನ್ನು ಹಾರೈಸಲಾಯಿತು. ಈ ಸಂದರ್ಭದಲ್ಲಿ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪ ಅವರು, ಸಂಸದ ಬಿ.ವೈ.ರಾಘವೇಂದ್ರ ಅವರು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…