ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಮಾಡಿ, ರಾಜ್ಯದ ಜನತೆಗೆ ಹೊರೆ ಮಾಡಿದೆ. ಹಾಗಾಗಿ ಸರ್ಕಾರ ತಕ್ಷಣ ಕೂಡಲೇ ಬೆಲೆ ಹಿಂಪಡೆಯಬೇಕೆಂದು ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.1) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ರಾಜ್ಯ ಸರ್ಕಾರ ಮುಸ್ಲಿಮರಿಗೆ ಶೇ.4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ ಬೆಲೆ ಒಂದು ವರ್ಷದ ಅವಧಿಯಲ್ಲಿ 9 ರೂಪಾಯಿ ಹೆಚ್ಚಳ ಮಾಡಿದೆ ಎಂದು ಕಿಡಿಕಾರಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ನಿರಂತರ ಬೆಲೆ ಏರಿಕೆಯ ನೀತಿಯಿಂದ ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ. ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾಲು, ವಿದ್ಯುತ್, ಮೆಟ್ರೋ ಹಾಗೂ ಬಸ್ ಟಿಕೆಟ್ ದರ ಸೇರಿದಂತೆ ಅಗತ್ಯ ವಸ್ತುಗಳ ಮೇಲೆ ನಿರಂತರವಾಗಿ ಬೆಲೆ ಏರಿಸುತ್ತಿದೆ. ಈ ಎಲ್ಲಾ ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ನಾಳೆ(ಏಪ್ರಿಲ್.2) ಬೆಳಿಗ್ಗೆಯಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು. ಈ ಧರಣಿಯಲ್ಲಿ ನಾನು ಸಹ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…