ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಮಾಡಿ, ರಾಜ್ಯದ ಜನತೆಗೆ ಹೊರೆ ಮಾಡಿದೆ. ಹಾಗಾಗಿ ಸರ್ಕಾರ ತಕ್ಷಣ ಕೂಡಲೇ ಬೆಲೆ ಹಿಂಪಡೆಯಬೇಕೆಂದು ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.1) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ರಾಜ್ಯ ಸರ್ಕಾರ ಮುಸ್ಲಿಮರಿಗೆ ಶೇ.4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ ಬೆಲೆ ಒಂದು ವರ್ಷದ ಅವಧಿಯಲ್ಲಿ 9 ರೂಪಾಯಿ ಹೆಚ್ಚಳ ಮಾಡಿದೆ ಎಂದು ಕಿಡಿಕಾರಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ನಿರಂತರ ಬೆಲೆ ಏರಿಕೆಯ ನೀತಿಯಿಂದ ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ. ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾಲು, ವಿದ್ಯುತ್, ಮೆಟ್ರೋ ಹಾಗೂ ಬಸ್ ಟಿಕೆಟ್ ದರ ಸೇರಿದಂತೆ ಅಗತ್ಯ ವಸ್ತುಗಳ ಮೇಲೆ ನಿರಂತರವಾಗಿ ಬೆಲೆ ಏರಿಸುತ್ತಿದೆ. ಈ ಎಲ್ಲಾ ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ನಾಳೆ(ಏಪ್ರಿಲ್.2) ಬೆಳಿಗ್ಗೆಯಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು. ಈ ಧರಣಿಯಲ್ಲಿ ನಾನು ಸಹ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…