ರಾಜ್ಯ

ಪೂರ್ಣ ಪ್ರಮಾಣದಲ್ಲಿ ಅಖಾಡಕ್ಕಿಳಿದ ಮಾಜಿ ಸಿಎಂ ಬಿಎಸ್‌ವೈ: ಕಾರಣ ಏನು ಗೊತ್ತಾ?

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇದೀಗ ಪೂರ್ಣ ಪ್ರಮಾಣದಲ್ಲಿ ರಾಜಕೀಯ ಅಖಾಡಕ್ಕಿಳಿಯುತ್ತಿದ್ದಾರೆ. ಮಗನ ವಿರುದ್ಧ ಹಾಗೂ ಕುಟುಂಬದ ವಿರುದ್ಧ ನಾನಾ ರೀತಿಯ ಗಂಭೀರ ಆರೋಪಗಳ ಸುರಿಮಳೆಯ ನಡುವೆಯೂ ಬಿಎಸ್‌ವೈ ಪುತ್ರನನ್ನು ಕಾಪಾಡಲು ಪಣ ತೊಟ್ಟಿದ್ದಾರೆ. ಇದರ ಭಾಗ ಎಂಬಂತೆ ರಾಜ್ಯ ಬಿಜೆಪಿ ಕಚೇರಿಗೆ ಯಡಿಯೂರಪ್ಪ ನಿರಂತರವಾಗಿ ಭೇಟಿ ನೀಡುತ್ತಿದ್ದು, ತನ್ನ ರಾಜಕೀಯ ಇರುವಿಕೆಯನ್ನು ತೋರಿಸುತ್ತಿದ್ದಾರೆ.

ಬಿಜೆಪಿ ಬಣ ರಾಜಕೀಯ ದಿನದಿಂದ ದಿನಕ್ಕೆ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಹೇಗಾದರು ಮಾಡಿ ಇಳಿಸಲೇಬೇಕು ಎಂದು ವಿರೋಧಿ ಬಣ ಪಣತೊಟ್ಟಿದೆ. ದಾವಣಗೆರೆಯಲ್ಲಿ ಜಿ.ಎಂ.ಸಿದ್ದೇಶ್ವರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ರೆಬೆಲ್ ಬಣದ ನಾಯಕರು ನೀಡಿದ ಹೇಳಿಕೆಗಳೇ ಇದಕ್ಕೆ ಸಾಕ್ಷಿಯಾಗಿವೆ. ಬಿಎಸ್‌ವೈ ವಿರುದ್ಧ ನೇರವಾಗಿ ಮಾಜಿ ಶಾಸಕ ಅರವಿಂದ ಲಿಂಬಾವಳಿ ತಿರುಗಿ ಬಿದ್ದಿದ್ದಾರೆ. ಕೆಜೆಪಿಗೆ ಹೋಗಿದ್ದ ಯಡಿಯೂರಪ್ಪ ಮರಳಿ ಬಿಜೆಪಿಗೆ ಬಂದಿದ್ಯಾಕೆ ಎಂದು ನೇರವಾಗಿಯೇ ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ವರಿಷ್ಠರು ಸ್ಪಷ್ಟ ನಿರ್ಧಾರಕ್ಕೆ ಬರುತ್ತಿಲ್ಲ. ಬೇರೆ ರಾಜ್ಯಗಳ ರಾಜ್ಯಾಧ್ಯಕ್ಷರ ನೇಮಕ ಆದರೂ ಕರ್ನಾಟಕಕ್ಕೆ ಸಂಬಂಧಿಸಿದಂತೆ ದೆಹಲಿ ನಾಯಕರು ನಿರ್ಧಾರವನ್ನು ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ವಿರೋಧಿ ಪಾಳಯದ ಕೈ ಮೇಲಾಗುವಂತೆ ಮಾಡುತ್ತಿದೆ.

ಈ ಬೆಳವಣಿಗೆಯ ನಡುವೆಯೂ ಬಿ.ಎಸ್.ಯಡಿಯೂರಪ್ಪ ಸಕ್ರಿಯವಾಗಿದ್ದಾರೆ. ಪ್ರತಿನಿತ್ಯ ಬಿಜೆಪಿ ರಾಜ್ಯ ಕಚೇರಿಗೆ ಆಗಮಿಸಿ ಪಕ್ಷದ ಕಾರ್ಯಕರ್ತರಲ್ಲೂ ಹುರುಪು ತುಂಬಿಸುತ್ತಿದ್ದಾರೆ. ಬಿಎಸ್‌ವೈ ಈ ನಡೆ ದೆಹಲಿಯ ನಾಯಕರಿಗೆ ನೀಡುತ್ತಿರುವ ಪರೋಕ್ಷ ಸಂದೇಶವಾಗಿದೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

3 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

4 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

5 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

6 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

6 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

7 hours ago