Categories: ರಾಜ್ಯ

ಸ್ನೇಹಮಯಿ ಕೃಷ್ಣ ವಿರುದ್ಧ ಸುಳ್ಳು ದೂರು ನೀಡಿ ಬೆದರಿಕೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

ಬೆಂಗಳೂರು: ಮುಡಾ ಪ್ರಕರಣದಲ್ಲಿ ತಂಬಾ ಭಯಭೀತರಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಕಾರ್ಯಕರ್ತ ಹಾಗೂ ಈ ಪ್ರಕರಣದ ರೂವಾರಿ ಸ್ನೇಹಮಯಿ ಕೃಷ್ಣರನ್ನು ಎದುರಿಸಲು ಅವರ ಹಿಂಬಾಲಕರ ಮೂಲಕ ಸುಳ್ಳು ದೂರುಗಳನ್ನು ಕೊಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್‌ ಮುಖಂಡರ ಮೂಲಕ ದೂರು ದಾಖಲಿಸಿರುವ ಕುರಿತು ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಂವಿಧಾನಾತ್ಮಕವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆಯಿಂದ ಕಾನೂನಾತ್ಮಕವಾಗಿ ನ್ಯಾಯದ ದಾರಿಯಲ್ಲಿ ಹೋರಾಡುತ್ತಿರುವ ಕಾರ್ಯಕರ್ತರನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪೊಲೀಸ್‌ ಬಲ ಪ್ರಯೋಗಿಸಿ ಸುಳ್ಳು ದೂರುಗಳನ್ನು ದಾಖಲಿಸಿ ದೂರುದಾರರನ್ನು ಬೆದರಿಸುವುದು ಹಾಗೂ ದೇಶದ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವುದು ಕಾಂಗ್ರೆಸ್‌ನವರ ಕೆಲಸವಾಗಿದೆ. ಇದು ಮುಂದುವರೆದಲ್ಲಿ ಬಿಜೆಪಿ ಅವರ ರಕ್ಷಣೆಗೆ ನಿಲ್ಲುತ್ತದೆ ಎಂದು ಧೈರ್ಯ ಹೇಳಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

23 mins ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

25 mins ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

30 mins ago

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

32 mins ago

ಕೊಡಗಿನಲ್ಲಿ ಮತ್ತೆ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…

36 mins ago

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

6 hours ago