ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ ಉದಾರೀಕರಣದ ರೂವಾರಿಯಾಗಿ ಭಾರತದ ಬೆಳವಣಿಗೆಗೆ ಅಮೋಘ ಕೊಡುಗೆ ನೀಡಿದ್ದ ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞರೂ ಆದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುವೆ. ಅವರ ಸರಳತೆ, ಸಜ್ಜನಿಕೆಯಿಂದಾಗಿ ಅಪರೂಪದ ವಿನಯವಂತ ಪಾಂಡಿತ್ಯ ಮೂರ್ತಿಯನ್ನು ಅವರಲ್ಲಿ ಕಾಣುವಂತಾಗಿತ್ತು. ಪಕ್ಷಾತೀತವಾಗಿ ಎಲ್ಲರ ಹೃದಯದಲ್ಲೂ ಸ್ನೇಹದ ಬಾಂಧವ್ಯ ಬೆಸೆದಿದ್ದ ಅವರು ಅಕ್ಷರಶಃ ಅಜಾತಶತ್ರುವಾಗಿದ್ದರು.
ಎಂದೂ ಯಾರೊಂದಿಗೂ ವಿರಸ ಕಟ್ಟಿಕೊಳ್ಳದೇ ಒಬ್ಬ ಶಿಸ್ತು ಬದ್ಧ ಅಧಿಕಾರಿಯಾಗಿ, ಸರಳತೆಯ ರಾಜಕಾರಣಿಯಾಗಿ, ಭಾರತದ ಪ್ರಧಾನಿಗಳಾಗಿ ಅವರ ಹತ್ತು ವರ್ಷಗಳ ಸುದೀರ್ಘ ಸೇವೆ ಮಹತ್ವದ ಮೈಲಿಗಲ್ಲು. ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಆಗಿ, ದೇಶದ ವಿತ್ತ ಸಚಿವರಾಗಿ ಅವರು ಇಟ್ಟ ಹೆಜ್ಜೆಗಳು ಆರ್ಥಿಕ ಸುಧಾರಣೆಯ ಮಹತ್ವದ ತಿರುವುಗಳು.
ಜನ ಸಾಮಾನ್ಯರು, ಕಡು ಬಡವರು ಆರ್ಥಿಕ ಚೇತನ ಹೊಂದುವಂತಾಗಲು ಎಲ್ಲಾ ಹಂತದಲ್ಲೂ ದೇಶಕ್ಕೆ ಬಂಡವಾಳ ಹರಿದುಬರುವಂತಾಗಲು ಮನಮೋಹನ್ ಸಿಂಗ್ ಅವರು ತೋರಿಸಿದ ಆರ್ಥಿಕ ಜಾಣ್ಮೆಯಿಂದಾಗಿ ಭಾರತದ ಕೈಗಾರಿಕೆ, ಕೃಷಿ, ಶಿಕ್ಷಣ, ವಾಣಿಜ್ಯ ಸೇರಿದಂತೆ ಇತರ ಕ್ಷೇತ್ರಗಳು ಚೈತನ್ಯ ತುಂಬಿಕೊಳ್ಳಲು ಕಾರಣವಾಯಿತು.
ಮನಮೋಹನ್ ಸಿಂಗ್ ಅವರ ಅಗಲಿಕೆಯಿಂದ ಒಬ್ಬ ಸಜ್ಜನಿಕೆಯ ಆಡಳಿತಗಾರರನ್ನಷ್ಟೇ ದೇಶ ಕಳೆದುಕೊಂಡಿಲ್ಲ, ಮೃದು ಭಾಷೆಯ ಒಬ್ಬ ಮಹಾನ್ ಶ್ರೇಷ್ಠ ಆರ್ಥಿಕ ತಜ್ಞನನ್ನು ಕಳೆದುಕೊಂಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ ಭಾರತದ ಇತಿಹಾಸದಲ್ಲಿ ಮನಮೋಹನ್ ಸಿಂಗ್ ಅವರ ವ್ಯಕ್ತಿತ್ವ, ಕೊಡುಗೆ ಹಾಗೂ ಸಾಧನೆಗಳು ಭಾರತದ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ. ಅಗಲಿದ ಮಹಾನ್ ಚೇತನಕ್ಕೆ ಗೌರವಪೂರ್ವಕ ನಮನಗಳು ಎಂದು ಕಂಬನಿ ಮಿಡಿದಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…