ರಾಜ್ಯ

ದೇವರೇ ಬಂದು ಕರ್ನಾಟಕದ ಆಡಳಿತ ಸರಿದೂಗಿಸಬೇಕು: ವಿಜಯೇಂದ್ರ ವ್ಯಂಗ್ಯ

ಬೆಂಗಳೂರು: ಕರ್ನಾಟಕದ ಆಡಳಿತವನ್ನು ದೇವರೇ ಬಂದು ಸರಿದೂಗಿಸಬೇಕಾದ ಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರದ ಕಾರ್ಯವೈಖರಿ ವಿರುದ್ದ ಕಿಡಿಕಾರಿರುವ ವಿಜಯೇಂದ್ರ, ಆಂತರಿಕ ಕಲಹದಲ್ಲಿ ರಾಜ್ಯದ ಆಡಳಿತ ಯಂತ್ರ ಈಗಾಗಲೇ ನಿಂತ ನೀರಾಗಿದ್ದರೆ, ಸುರ್ಜೇವಾಲ ಅವರು ತಳಕಚ್ಚಿರುವ ಬಾವಿಯಲ್ಲೇ ನೀರು ಸೇದುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ನಡುವೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡುವಿನ ಶೀತಲ ಸಮರ, ದೆಹಲಿಯ ಅವರ ಇಬ್ಬರು ಅತ್ಯಾಪ್ತ ಸಿಬ್ಬಂದಿಗಳ ವರೆಗೂ ವ್ಯಾಪಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಬಹುತೇಕ ಅಸ್ಥಿತ್ವ ಕಳೆದುಕೊಂಡಿರುವ ಕಾಂಗ್ರೆಸ್‌ಗೆ ಕರ್ನಾಟಕ ರಾಜ್ಯ ಒಂದೇ ಆಧಾರಸ್ತಂಭವಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವಿನ ಭರವಸೆ ಪಡೆದುಕೊಂಡ ಸಂಕಷ್ಟಿತ ರೋಗಿಗಳ ಚಿಕಿತ್ಸೆಗೂ ಹಣ ಜಮೆ ಆಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುವಷ್ಟರ ಮಟ್ಟಿಗೆ ಸರ್ಕಾರದ ಆರ್ಥಿಕ ಸ್ಥಿತಿ ದಿವಾಳಿಯ ಹಂತ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ರಾಜ್ಯದ ಜನತೆಯ ಗೋಳು ಕೇಳುವವರೇ ಇಲ್ಲದಂತಾಗಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಆಡಳಿತ ನಡೆಯುತ್ತಿರುವುದು ವಿಧಾನಸೌಧದಿಂದಲ್ಲ, ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ನಿವಾಸದಿಂದ ಎಂಬುದು ಇದೀಗ ಸ್ಪಷ್ಟವಾಗಿದೆ’. ದೆಹಲಿಗೆ ಹೋಗಿ
ರಾಹುಲ್ ಗಾಂಧಿ ಅವರ ಆದೇಶ ಪಡೆದು ಅಲ್ಲಿಂದಲೇ ನಿರ್ಧಾರಗಳನ್ನು ಪ್ರಕಟಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಅಂಕುಶ ಹಾಕಿದಂತಿರುವ ಹೈಕಮಾಂಡ್ (ಉದಾಹರಣೆಗೆ ಕಾಂತರಾಜು ಆಯೋಗದ ವರದಿ ತಿರಸ್ಕಾರ) ಪಕ್ಷದ ಉಸ್ತುವಾರಿ ರಣಜಿತ್ ಸಿಂಗ್ ಸುರ್ಜೇವಾಲ ಅವರನ್ನು ಸರ್ಕಾರದ ಆಡಳಿತವನ್ನು ನಿಯಂತ್ರಿಸುವ ರಾಯಭಾರಿಯನ್ನಾಗಿ ನೇಮಿಸಿರುವುದರ ಸಾಕ್ಷಿಯಾಗಿದೆ.

ಸರ್ಕಾರಿ ಹಿರಿಯ ಅಧಿಕಾರಿಗಳ ಜೊತೆ ನಿರಂತರ ಸಭೆ ನಡೆಸುತ್ತಿರುವುದೇ ಸಾಕ್ಷಿಯಾಗಿದೆ. ಈ ಸಂಬಂಧ ಅನೇಕ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದು ಸಚಿವ ಕೆ.ಎನ್ ರಾಜಣ್ಣ ಅವರು ಬಹಿರಂಗವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವಿಜಯೇಂದ್ರ ಉಲ್ಲೇಖ ಮಾಡಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

15 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

18 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

21 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

21 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

21 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

21 hours ago