ಬೆಂಗಳೂರು: ಪಕ್ಷದಲ್ಲಿ ನನ್ನನ್ನು ಟಾರ್ಗೆಟ್ ಮಾಡೋರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಜನವರಿ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ನನ್ನನ್ನು ಟಾರ್ಗೆಟ್ ಮಾಡೋರು ಮಾಡಿಕೊಳ್ಳಲಿ, ನಾನು ಕೆಲಸ ಮಾಡಲು ಬಂದಿದ್ದೇನೆ. ಪಕ್ಷದಲ್ಲಿ ಶಾಸಕರು ಕೆಲಸ ಮಾಡಲು ಬಂದಿರೋರು, ಕೆಲಸ ಮಾಡಿಕೊಂಡು ಹೋಗುತ್ತಾರೆ. ಆದರೆ ಕೆಲಸ ಇಲ್ಲದೇ ಇರೋರು ಹೀಗೆಲ್ಲಾ ಮಾತನಾಡುತ್ತಾರೆ. ಮಾತನಾಡುವವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ.
ಇದೇ ಸಂದರ್ಭದಲ್ಲಿ ಶಾಸಕ ಯತ್ನಾಳ್ ವಿರುದ್ಧ ಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ವಿರುದ್ಧ ಯಾರು ಕ್ರಮ ಕೈಗೊಳ್ಳಬೇಕೋ ಅವರೇ ತೆಗೆದುಕೊಳ್ಳುತ್ತಾರೆ. ಇನ್ನೂ ಫೆಬ್ರವರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಆದರೆ ಪಕ್ಷದ ಇಂದಿನ ಬೆಳವಣಿಗೆಗೆಗಳ ಕುರಿತು ಕಾರ್ಯಕರ್ತರಿಗೆ ನೋವು ತಂದಿದೆ. ಆ ನೋವು ಏನೆಂದು ನನಗೆ ಅರ್ಥವಾಗುತ್ತದೆ. ಅಲ್ಲದೇ ಇದೆಲ್ಲದಕ್ಕೂ ಇತಿಶ್ರೀ ಹಾಡೋ ಕೆಲಸವನ್ನು ಹೈಕಮಾಂಡ್ ಮಾಡಲಿದೆ ಎಂದು ಹೇಳಿದರು.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…