ಬೆಂಗಳೂರು: ರಾಜ್ಯ ಸರ್ಕಾರ ಬರಿದಾಗಿರುವ ಬೊಕ್ಕಸವನ್ನು ತುಂಬಿಕೊಳ್ಳಲು ವಿದ್ಯುತ್ ಬಿಲ್ ದರ ಏರಿಕೆ ಮಾಡಿ ಜನಸಾಮಾನ್ಯರ ಹಣವನ್ನು ಲೂಟಿ ಮಾಡಿ ಹಗಲು ದರೋಡೆ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಿನ್ನೆಯಷ್ಟೇ ವಿದ್ಯುತ್ ಬಿಲ್ ದರ ಏರಿಕೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಹೆಸರಿನಲ್ಲಿ 15,500 ಕೋಟಿ ರೂ. ಹಗರಣ ನಡೆಸುವ ಮೂಲಕ ಜನರ ಹಣ ಲೂಟಿ ಮಾಡಿರುವುದು ಬಯಲಾಗಿದೆ. ದೇಶದ ಇತರ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ 9,00 ರೂ. ಪಾವತಿಸಿದರೆ, ನಮ್ಮ ರಾಜ್ಯದಲ್ಲಿ ಮಾತ್ರ ಬರೋಬ್ಬರಿ 8,510 ರೂ. ದರ ನಿಗದಿ ಮಾಡಿರುವುದು ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಜನಸಾಮಾನ್ಯರ ಮೇಲೆ ಒಂದಿಲ್ಲೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ರಾಜ್ಯ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಶೇ.400-800 ರಷ್ಟು ದರ ಏರಿಕೆ ಮಾಡಿರುವುದು ಗ್ಯಾರಂಟಿ ನಂಬಿ ಮತ ನೀಡಿದ ನಾಡಿನ ಜನರ ದುರ್ದೈವವೇ ಸರಿ ಎಂದು ಕಿಡಿಕಾರಿದ್ದಾರೆ.
ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಲೂಟಿಕೋರತನ ನಿಲ್ಲಿಸಿ ವಿದ್ಯುತ್ ಸ್ಮಾರ್ಟ್ ಮೀಟರ್ ದರವನ್ನು ಈ ಹಿಂದಿನಂತೆಯೇ ನಿಗದಿಪಡಿಸದಿದ್ದರೆ ನಮ್ಮ ಬಜೆಪಿ ಪಕ್ಷ ನಾಡಿನ ಜನಸಾಮಾನ್ಯರ ಪರವಾಗಿ ಹೋರಾಟಕ್ಕಿಳಿಯಲಿದೆ ಎಂದು ಎಚ್ಚರಿಸಬಯಸುತ್ತೇನೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…