ಬೆಂಗಳೂರು: ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವುದನ್ನು ನೋಡಿದರೆ, ಸರ್ಕಾರ ತಮ್ಮ ಹಗರಣಗಳನ್ನು ಮುಚ್ಚಿಕೊಳ್ಳಲು ಸಣ್ಣ ಪ್ರಕರಣವನ್ನು ವಿವಾದವನ್ನಾಗಿ ಸೃಷ್ಠಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿಯವರು ತಮ್ಮ ಹೇಳಿಕೆಯ ಕುರಿತಂತೆ ಸೌಹಾರ್ದತೆಯನ್ನು ಪುಷ್ಠೀಕರಿಸಿ ಸೂಕ್ತ ಸ್ಪಷ್ಟನೆ ನೀಡಿ ವಿವಾದಕ್ಕೆ ಇತಿಶ್ರೀ ಹಾಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಆದರೆ ಈ ಪ್ರಕರಣವನ್ನು ಇಷ್ಟಕ್ಕೇ ಕೈ ಬಿಡಬಹುದಾಗಿದ್ದ ಸರ್ಕಾರ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗುವಂತೆ ನೋಡಿಕೊಂಡು ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಯುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ದೇಶದ್ರೋಹಿಗಳು, ಸಮಾಜ ಘಾತುಕ ಶಕ್ತಿಗಳ ವಿರುದ್ಧ ಪ್ರಕರಣಗಳನ್ನು ಹಿಂಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಒಬ್ಬ ಸಜ್ಜನಿಕೆಯ ಸಂತರೆಂದು ಕರೆಸಿಕೊಂಡಿರುವ ಹಿರಿಯ ಸ್ವಾಮೀಜಿ ಬಾಯ್ತಪ್ಪಿದ ಮಾತು ಕ್ರಿಮಿನಲ್ ಅಪರಾಧದಂತೆ ಕಂಡಿರುವುದು ವಿಪರ್ಯಾಸವೆನಿಸುತ್ತದೆ ಎಂದು ಹೇಳಿದ್ದಾರೆ.
ಸ್ವಾಮೀಜಿಯವರು ತಾವು ಆಡಿದ ಮಾತುಗಳ ಕುರಿತು ಸೂಕ್ತ ಸ್ಪಷ್ಟನೆ ನೀಡಿ ಮುಸ್ಲಿಂ ಸಮುದಾಯದೊಂದಿಗಿನ ತಮ್ಮ ಬಾಂಧವ್ಯದ ಕುರಿತು ವಿವರಣೆ ನೀಡಿರುವಾಗ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಹಾಗೂ ಹಗರಣಗಳನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ಪ್ರಕರಣಗಳನ್ನೂ ದೊಡ್ಡ ವಿವಾದವನ್ನಾಗಿಸಲು ಹೊರಟು ಜನರ ದಿಕ್ಕು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ. ಹೀಗಾಗಿ ಚಂದ್ರಶೇಖರನಾಥ ಸ್ವಾಮೀಜಿ ನೋಟೀಸ್ ನೀಡಿ ವಿಚಾರಣೆಗೆ ಕರೆದಿರುವ ಈ ಕ್ರಮವನ್ನು ಬಿಜೆಪಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…