ರಾಜ್ಯ

ದಕ್ಷ, ಸದೃಢ ಆಡಳಿತವಿದ್ದರೆ ಅಸಾಧ್ಯವೂ ಸಾಧ್ಯ: ಬಿ.ವೈ.ವಿಜಯೇಂದ್ರ

ಬೆಂಗಳೂರು: ದಕ್ಷ ಹಾಗೂ ಸದೃಢ ಆಡಳಿತವಿದ್ದರೆ ಅಸಾಧ್ಯವೂ ಸಾಧ್ಯ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಎಸ್‌ಎನ್‌ಎಲ್‌ಗೆ ಮಹತ್ವದ ತಿರುವು ಸಿಕ್ಕಿ ಸೇವಾ ವಿಸ್ತರಣೆಯೊಂದಿಗೆ ಚಂದಾದಾರರ ಸಂಖ್ಯೆಯೂ ಹೆಚ್ಚಳವಾಗಿರುವುದೇ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೆಂದ್ರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸದೃಢ ನಾಯಕತ್ವದಲ್ಲಿ BSNL ಐತಿಹಾಸಿಕ ತಿರುವು ಪಡೆದಿರುವುದು ಹೆಮ್ಮೆಯ ಸಂಗತಿ. BSNL ಸಂಸ್ಥೆಯನ್ನು ಲಾಭದಾಯಕ ಹಾದಿಗೆ ಕೊಂಡೊಯ್ಯಲೇಬೇಕೆಂಬ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಸರ್ಕಾರ ಸಂಕಲ್ಪ ತೊಟ್ಟು BSNLನ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು 1.64 ಲಕ್ಷ ಕೋಟಿ ರೂ. ಪುನಶ್ಚೇತನ ಪ್ಯಾಕೇಜ್ ನೀಡಿದ್ದರು ಎಂದು ಮಾಹಿತಿ ನೀಡಿದ್ದಾರೆ.

ರಾಷ್ಟ್ರವ್ಯಾಪಿ 4G ರೋಲ್‌ಔಟ್‌ಗಾಗಿ 44,993 ಕೋಟಿ ರೂ. ಸ್ಪೆಕ್ಟ್ರಮ್ ಹಂಚಿಕೆ ಮಾಡಲಾಗಿತ್ತು, ಆತ್ಮನಿರ್ಭರ ಭಾರತ ದೃಷ್ಟಿಗೆ ಅನುಗುಣವಾಗಿ ಸ್ವದೇಶಿ 4G ನಿಯೋಜನೆ ಮಾಡುವ ಮೂಲಕ 40,399 ಕೋಟಿ ರೂ.ಗಳ ಸಾಲ ನೀಡಿ, ಫೈಬರ್ ನೆಟ್‌ವರ್ಕ್ ಮತ್ತು ಗ್ರಾಮೀಣ ಸಂಪರ್ಕವನ್ನು ವಿಸ್ತರಿಸಲು BBNL ನೊಂದಿಗೆ ವಿಲೀನ ಮಾಡಿದ ಪರಿಣಾಮವಾಗಿ ಇಂದು ಬಿಎಸ್ಎನ್ಎಲ್ ತನ್ನ ಯಶೋಗಾಥೆ ಆರಂಭಿಸುವಂತಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಮುಳುಗುತ್ತಿದ್ದ BSNL ಸಂಸ್ಥೆ NDA ಸರ್ಕಾರದ ಅವಧಿಯಲ್ಲಿ ಪುಟಿದೇಳುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

2 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

4 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

4 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

4 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

4 hours ago