ಬೆಂಗಳೂರು: ದಕ್ಷ ಹಾಗೂ ಸದೃಢ ಆಡಳಿತವಿದ್ದರೆ ಅಸಾಧ್ಯವೂ ಸಾಧ್ಯ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಎಸ್ಎನ್ಎಲ್ಗೆ ಮಹತ್ವದ ತಿರುವು ಸಿಕ್ಕಿ ಸೇವಾ ವಿಸ್ತರಣೆಯೊಂದಿಗೆ ಚಂದಾದಾರರ ಸಂಖ್ಯೆಯೂ ಹೆಚ್ಚಳವಾಗಿರುವುದೇ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೆಂದ್ರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸದೃಢ ನಾಯಕತ್ವದಲ್ಲಿ BSNL ಐತಿಹಾಸಿಕ ತಿರುವು ಪಡೆದಿರುವುದು ಹೆಮ್ಮೆಯ ಸಂಗತಿ. BSNL ಸಂಸ್ಥೆಯನ್ನು ಲಾಭದಾಯಕ ಹಾದಿಗೆ ಕೊಂಡೊಯ್ಯಲೇಬೇಕೆಂಬ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಸರ್ಕಾರ ಸಂಕಲ್ಪ ತೊಟ್ಟು BSNLನ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು 1.64 ಲಕ್ಷ ಕೋಟಿ ರೂ. ಪುನಶ್ಚೇತನ ಪ್ಯಾಕೇಜ್ ನೀಡಿದ್ದರು ಎಂದು ಮಾಹಿತಿ ನೀಡಿದ್ದಾರೆ.
ರಾಷ್ಟ್ರವ್ಯಾಪಿ 4G ರೋಲ್ಔಟ್ಗಾಗಿ 44,993 ಕೋಟಿ ರೂ. ಸ್ಪೆಕ್ಟ್ರಮ್ ಹಂಚಿಕೆ ಮಾಡಲಾಗಿತ್ತು, ಆತ್ಮನಿರ್ಭರ ಭಾರತ ದೃಷ್ಟಿಗೆ ಅನುಗುಣವಾಗಿ ಸ್ವದೇಶಿ 4G ನಿಯೋಜನೆ ಮಾಡುವ ಮೂಲಕ 40,399 ಕೋಟಿ ರೂ.ಗಳ ಸಾಲ ನೀಡಿ, ಫೈಬರ್ ನೆಟ್ವರ್ಕ್ ಮತ್ತು ಗ್ರಾಮೀಣ ಸಂಪರ್ಕವನ್ನು ವಿಸ್ತರಿಸಲು BBNL ನೊಂದಿಗೆ ವಿಲೀನ ಮಾಡಿದ ಪರಿಣಾಮವಾಗಿ ಇಂದು ಬಿಎಸ್ಎನ್ಎಲ್ ತನ್ನ ಯಶೋಗಾಥೆ ಆರಂಭಿಸುವಂತಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಮುಳುಗುತ್ತಿದ್ದ BSNL ಸಂಸ್ಥೆ NDA ಸರ್ಕಾರದ ಅವಧಿಯಲ್ಲಿ ಪುಟಿದೇಳುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…