ರಾಜ್ಯ

ರಾಜ್ಯದಲ್ಲಿರುವುದು ಕಾಂಗ್ರೆಸ್‌ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನಮ್ಮ ರಾಜ್ಯದಲ್ಲಿರುವುದು ಕಾಂಗ್ರೆಸ್‌ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ ಎಂದು ಬಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಇಂದು(ಮಾರ್ಚ್‌.5) ವಿದ್ಯುತ್ ಮೀಟರ್ ದರ ಏರಿಕೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವ ಸರ್ಕಾರವಿದೆ. ಹಾಗಾಗಿಯೇ ಪ್ರತಿನಿತ್ಯ ಬಳಸುವ ಎಲ್ಲಾ ವಸ್ತುಗಳ ಮೇಲೆ ಬೆಲೆಗಳು ಏರಿಕೆ ಆಗುತ್ತಿವೆ. ಅವುಗಳಲ್ಲಿ ಹಾಲು ಮತ್ತು ವಿದ್ಯುತ್‌ ಮೀಟರ್‌ ಬೆಲೆ ಏರಿಕೆ ಮಾಡಿರುವುದರಿಂದ ರಾಜ್ಯದ ಜನತೆಗೆ ಹೊರೆಯಾಗುತ್ತಿದೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಅವರು ನಿಜವಾಗಿಯೂ ಅಹಿಂದ ನಾಯಕೇ ಆಗಿದ್ದರೇ ಹಿಂದುಳಿದ ವರ್ಗಗಳ ಅಭಿವೃದ್ಧಿ ಮಾಡಲಿ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಳೆದ 20 ತಿಂಗಳಿನಿಂದ ಯಾವುದೇ ಅಭಿವೃಧ್ಧಿ ಕಾಮಗಾರಿಗೆ ಚಾಲನೆ ನೀಡಿಲ್ಲ. ಅಲ್ಲದೇ ಸರ್ಕಾರಕ್ಕೆ ತಮ್ಮ ಪಕ್ಷದ ಶಾಸಕರಿಗೆ ಅನುದಾನ ನೀಡಲು ಸಾಧ್ಯವಾಗುತ್ತಿಲ್ಲ. ಎಸ್‌ಸಿ ಮತ್ತು ಎಸ್‌ಟಿ ಅವರಿಗೆ ಟೆಂಡ್‌ಗೆ ಮೀಸಲಾತ ನೀಡಿದ್ದಾರೆ. ಆದರೆ ಎಲ್ಲಿ ಕೆಲಸದ ಟೆಂಡರ್‌ ಕರೆದಿದ್ದಾರೆ? ಇನ್ನು ಈ ಮಧ್ಯೆ ಮುಸಲ್ಮಾನರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಸಂಕ್ರಾಂತಿ ಸಂಭ್ರಮ | ನಾಡಿನ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ, ಖರ್ಗೆ, ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ…

3 hours ago

ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಹೃದಯಘಾತದಿಂದ ಸಾವು

ರಾಯಚೂರು : ದೇವದುರ್ಗ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ…

3 hours ago

ಓದುಗರ ಪತ್ರ | ಸುಗ್ಗಿಯ ಹಬ್ಬ ಸಂಕ್ರಾಂತಿ

ಮನೆ ಮಂದಿ ಮಕ್ಕಳು ಕೂಡಿ ಕಣ ಹೊಕ್ಕಿ, ಹೊಲ ಗದ್ದೆಯೆಲ್ಲಾ ಬೆಳೆದ ಬೆಳೆ ಕೈಗೆ ಬಂದೈತಿ ನಗುವಿಂದ ಮಿಂದು ಸುಗ್ಗಿಯ…

3 hours ago

ಓದುಗರ ಪತ್ರ | ವನರಂಗದ ಬಯಲು ಮಂದಿರದ ಮೇಲ್ಭಾಗ ಮುಚ್ಚಲಿ

ಮೈಸೂರಿನ ಕರ್ನಾಟಕ ಕಲಾಮಂದಿರದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಬಹುರೂಪಿ ನಾಟಕೋತ್ಸವ ನಡೆಯುತ್ತಿದೆ. ಸಿನಿಮಾ ವೀಕ್ಷಿಸಲು ಸಾರ್ವಜನಿಕರಿಗೆ ಉಚಿತ ಹಾಗೂ…

3 hours ago

ಓದುಗರ ಪತ್ರ | ಟೀಸರ್, ಟ್ರೇಲರ್‌ಗಳಿಗೂ ನಿಯಂತ್ರಣ ಅಗತ್ಯ

ಚಿತ್ರ ನಟ ಯಶ್ ಅಭಿನಯದ ಟ್ಯಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾದ ಬಳಿಕ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಟೀಸರ್‌ನಲ್ಲಿ ಕಾಣಿಸಿಕೊಂಡಿರುವ ಆಕ್ಷೇಪಾರ್ಹ…

3 hours ago

ರಾಮನಗುಡ್ಡ ಜಲಾಶಯಕ್ಕೆ ಕೊನೆಗೂ ನೀರು

ನನೆಗುದಿಗೆ ಬಿದ್ದಿದ್ದ ನೀರು ತುಂಬಿಸುವ ಕಾರ್ಯಕ್ಕೆ ನಾಳೆ ಶಾಸಕ ಮಂಜುನಾಥ್ ಅವರಿಂದ ಚಾಲನೆ; ರೈತರಲ್ಲಿ ಸಂತಸ ಮಹಾದೇಶ್‌ ಎಂ ಗೌಡ…

3 hours ago