ರಾಜ್ಯ

ರಾಜ್ಯದಲ್ಲಿರುವುದು ಕಾಂಗ್ರೆಸ್‌ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನಮ್ಮ ರಾಜ್ಯದಲ್ಲಿರುವುದು ಕಾಂಗ್ರೆಸ್‌ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ ಎಂದು ಬಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಇಂದು(ಮಾರ್ಚ್‌.5) ವಿದ್ಯುತ್ ಮೀಟರ್ ದರ ಏರಿಕೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವ ಸರ್ಕಾರವಿದೆ. ಹಾಗಾಗಿಯೇ ಪ್ರತಿನಿತ್ಯ ಬಳಸುವ ಎಲ್ಲಾ ವಸ್ತುಗಳ ಮೇಲೆ ಬೆಲೆಗಳು ಏರಿಕೆ ಆಗುತ್ತಿವೆ. ಅವುಗಳಲ್ಲಿ ಹಾಲು ಮತ್ತು ವಿದ್ಯುತ್‌ ಮೀಟರ್‌ ಬೆಲೆ ಏರಿಕೆ ಮಾಡಿರುವುದರಿಂದ ರಾಜ್ಯದ ಜನತೆಗೆ ಹೊರೆಯಾಗುತ್ತಿದೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಅವರು ನಿಜವಾಗಿಯೂ ಅಹಿಂದ ನಾಯಕೇ ಆಗಿದ್ದರೇ ಹಿಂದುಳಿದ ವರ್ಗಗಳ ಅಭಿವೃದ್ಧಿ ಮಾಡಲಿ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಳೆದ 20 ತಿಂಗಳಿನಿಂದ ಯಾವುದೇ ಅಭಿವೃಧ್ಧಿ ಕಾಮಗಾರಿಗೆ ಚಾಲನೆ ನೀಡಿಲ್ಲ. ಅಲ್ಲದೇ ಸರ್ಕಾರಕ್ಕೆ ತಮ್ಮ ಪಕ್ಷದ ಶಾಸಕರಿಗೆ ಅನುದಾನ ನೀಡಲು ಸಾಧ್ಯವಾಗುತ್ತಿಲ್ಲ. ಎಸ್‌ಸಿ ಮತ್ತು ಎಸ್‌ಟಿ ಅವರಿಗೆ ಟೆಂಡ್‌ಗೆ ಮೀಸಲಾತ ನೀಡಿದ್ದಾರೆ. ಆದರೆ ಎಲ್ಲಿ ಕೆಲಸದ ಟೆಂಡರ್‌ ಕರೆದಿದ್ದಾರೆ? ಇನ್ನು ಈ ಮಧ್ಯೆ ಮುಸಲ್ಮಾನರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago