ಮಂಡ್ಯ: ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಮಂಡನೆ ಮಾಡಲಿರುವ ಬಜೆಟ್ ರೈತರ ಪರವಾಗಿ ಬಜೆಟ್ ಮಂಡನೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಕೊತ್ತತ್ತಿ ಗ್ರಾಮದ ಜಮೀನಿನಲ್ಲಿ ಇಂದು(ಮಾರ್ಚ್.4) ಭತ್ತ ನಾಟಿದ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ರೈತಪರ ಅಭಿವೃದ್ಧಿ ಕಾರ್ಯಗಳಾಗಲಿ ಅಥವಾ ತೀರ್ಮಾನಗಳನ್ನು ಮಾಡಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಉತ್ತಮ ಬುದ್ಧಿಯನ್ನು ತಾಯಿ ಚಾಮುಂಡೇಶ್ವರಿ ದೇವಿ ಕರುಣಿಸಲಿ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಒಂದು ಕಡೆ ಗ್ಯಾರಂಟಿ ನೀಡುವುದಾಗಿ ಹೇಳುತ್ತಾರೆ. ಇನ್ನೊಂದು ಕಡೆ ಕಿತ್ತುಕೊಳ್ಳುವ ಕೆಲಸ ನಡೆಸುತ್ತಿದ್ದಾರೆ. ಇದು ಬಡವರ ವಿರೋಧಿ ಸರ್ಕಾರವಾಗಿದೆ. ಅಲ್ಲದೇ ಈ ಸರ್ಕಾರದ ಅಭಿವೃದ್ಧಿ ಶೂನ್ಯವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಈ ಬಾರಿ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಮ್ಮ ಇಜೆಪಿ ಪಕ್ಷ ಭಷ್ಟ್ರ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಲಿದೆ. ಜೊತೆಗೆ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡಲಿದ್ದೇವೆ ಎಂದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…