ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಮುಂದುವರೆಸಿದ್ದು, ಹಾಲಿನ ದರ 4 ರೂ. ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪಂಚ ಭಾಗ್ಯಗಳನ್ನು ನಿರ್ವಹಿಸಲು ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರಿಗೆ ಬೆಲೆ ಏರಿಕೆಯ ದೌರ್ಭಾಗ್ಯವನ್ನು ನಿರಂತರ ಹೇರುತ್ತಲೇ ಬರುತ್ತಿದೆ. ಕುಡಿಯುವ ನೀರು, ವಿದ್ಯುತ್ ಬಿಲ್, ಸಾರಿಗೆ, ಅಗತ್ಯ ವಸ್ತುಗಳು ಹೀಗೆ ಒಂದರ ಮೇಲೊಂದರಂತೆ ಬೆಲೆ ಏರಿಕೆಯ ಬಿಸಿಯನ್ನು ಜನ ಅನುಭವಿಸುತ್ತಿರುವ ಹೊತ್ತಿನಲ್ಲೇ, ಈ ಸರ್ಕಾರ ಅಧಿಕಾರಕ್ಕೆ ಬಂದಮೇಲೆ 2 ನೇ ಬಾರಿ ಹಾಲಿನ ದರ ಏರಿಕೆ ಮಾಡುವ ಮೂಲಕ ಬೆಲೆ ಏರಿಕೆ ಬರೆ ಎಳೆಯುವಲ್ಲಿ ಪೈಪೋಟಿಗೆ ಬಿದ್ದಂತೆ ಕಾಣುತ್ತಿದೆ. ಸದ್ಯ ಹಾಲಿನ ದರ 4 ರೂ. ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ಕಿಡಿಕಾರಿದ್ದಾರೆ.
ಹೈನುಗಾರಿಕೆ ಅವಲಂಬಿಸಿರುವ ರೈತ ಸಮುದಾಯಕ್ಕೆ ಹೆಚ್ಚಿನ ದರ ಹಾಗೂ ಪ್ರೋತ್ಸಾಹ ಧನವನ್ನು ಕೊಡುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕೇ ಹೊರತು, ಈ ಕಾರಣವನ್ನು ಮುಂದಿಟ್ಟುಕೊಂಡು ಜನರ ಮೇಲೆ ಬೆಲೆ ಏರಿಕೆಯ ಬಿಸಿ ತಟ್ಟಿಸಲು ಹೊರಟಿರುವುದು ‘ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ನಡೆಯಾಗುತ್ತದೆ’. ರೈತರನ್ನೂ ಉತ್ತೇಜಿಸಬೇಕು ಜನಸಾಮಾನ್ಯರ ಹಿತಾಸಕ್ತಿಯನ್ನೂ ಕಾಪಾಡಬೇಕು, ಇದು ಸಮರ್ಥ ಜನಪರ ಹಾಗೂ ಯೋಗ್ಯ ಸರ್ಕಾರದಿಂದ ಮಾತ್ರ ಸಾಧ್ಯವಾಗುತ್ತದೆ. ಇಂತಹ ಯಾವ ಅರ್ಹತೆಗಳೂ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವೇ ಇಲ್ಲ ಎಂದು ದೂರಿದ್ದಾರೆ.
ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯನ್ನು ನಮ್ಮ ಬಿಜೆಪಿ ಪಕ್ಷ ನಿರಂತರ ಪ್ರತಿಭಟಿಸುತ್ತಲೇ ಬರುತ್ತಿದ್ದರೂ ಈ ಸರ್ಕಾರ ಜನಾಕ್ರೋಶಕ್ಕೆ ಕ್ಯಾರೇ ಎನ್ನುತ್ತಿಲ್ಲ, ಅಧಿಕಾರಕ್ಕಾಗಿ ಕಚ್ಚಾಡುವುದನ್ನು ಬಿಟ್ಟರೆ ಕಾಂಗ್ರೆಸ್ ಸರ್ಕಾರದ ಅಂಗಳದಲ್ಲಿ ಏನೇನು ಈಗ ಉಳಿದಿಲ್ಲ, ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಬೆಲೆ ಏರಿಸುವುದನ್ನು ಬಿಟ್ಟರೆ ಅನ್ಯಮಾರ್ಗವಿಲ್ಲ ಎಂಬ ಪರಿಸ್ಥಿತಿ ಇರುವುದನ್ನು ಸರ್ಕಾರ ಅನಾವರಣಗೊಳಿಸಿಕೊಳ್ಳುತ್ತಿದೆ. ಪ್ರತಿಯೊಂದು ಕುಟುಂಬವೂ ಬಳಸುವ ಹಾಲಿನ ದರವನ್ನು ಏರಿಸಲು ಸಂಪುಟ ನಿರ್ಧರಿಸಿರುವ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…