ರಾಜ್ಯ

ಹಾಲಿನ ಏರಿಕೆ| ರಾಜ್ಯ ಸರ್ಕಾರದಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ನಿರ್ಧಾರ ಹಗಲು ದರೋಡೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಮುಂದುವರೆಸಿದ್ದು, ಹಾಲಿನ ದರ 4 ರೂ. ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪಂಚ ಭಾಗ್ಯಗಳನ್ನು ನಿರ್ವಹಿಸಲು ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರಿಗೆ ಬೆಲೆ ಏರಿಕೆಯ ದೌರ್ಭಾಗ್ಯವನ್ನು ನಿರಂತರ ಹೇರುತ್ತಲೇ ಬರುತ್ತಿದೆ. ಕುಡಿಯುವ ನೀರು, ವಿದ್ಯುತ್ ಬಿಲ್, ಸಾರಿಗೆ, ಅಗತ್ಯ ವಸ್ತುಗಳು ಹೀಗೆ ಒಂದರ ಮೇಲೊಂದರಂತೆ ಬೆಲೆ ಏರಿಕೆಯ ಬಿಸಿಯನ್ನು ಜನ ಅನುಭವಿಸುತ್ತಿರುವ ಹೊತ್ತಿನಲ್ಲೇ, ಈ ಸರ್ಕಾರ ಅಧಿಕಾರಕ್ಕೆ ಬಂದಮೇಲೆ 2 ನೇ ಬಾರಿ ಹಾಲಿನ ದರ ಏರಿಕೆ ಮಾಡುವ ಮೂಲಕ ಬೆಲೆ ಏರಿಕೆ ಬರೆ ಎಳೆಯುವಲ್ಲಿ ಪೈಪೋಟಿಗೆ ಬಿದ್ದಂತೆ ಕಾಣುತ್ತಿದೆ. ಸದ್ಯ ಹಾಲಿನ ದರ 4 ರೂ. ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ಕಿಡಿಕಾರಿದ್ದಾರೆ.

ಹೈನುಗಾರಿಕೆ ಅವಲಂಬಿಸಿರುವ ರೈತ ಸಮುದಾಯಕ್ಕೆ ಹೆಚ್ಚಿನ ದರ ಹಾಗೂ ಪ್ರೋತ್ಸಾಹ ಧನವನ್ನು ಕೊಡುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕೇ ಹೊರತು, ಈ ಕಾರಣವನ್ನು ಮುಂದಿಟ್ಟುಕೊಂಡು ಜನರ ಮೇಲೆ ಬೆಲೆ ಏರಿಕೆಯ ಬಿಸಿ ತಟ್ಟಿಸಲು ಹೊರಟಿರುವುದು ‘ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ನಡೆಯಾಗುತ್ತದೆ’. ರೈತರನ್ನೂ ಉತ್ತೇಜಿಸಬೇಕು ಜನಸಾಮಾನ್ಯರ ಹಿತಾಸಕ್ತಿಯನ್ನೂ ಕಾಪಾಡಬೇಕು, ಇದು ಸಮರ್ಥ ಜನಪರ ಹಾಗೂ ಯೋಗ್ಯ ಸರ್ಕಾರದಿಂದ ಮಾತ್ರ ಸಾಧ್ಯವಾಗುತ್ತದೆ. ಇಂತಹ ಯಾವ ಅರ್ಹತೆಗಳೂ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವೇ ಇಲ್ಲ ಎಂದು ದೂರಿದ್ದಾರೆ.

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯನ್ನು ನಮ್ಮ ಬಿಜೆಪಿ ಪಕ್ಷ ನಿರಂತರ ಪ್ರತಿಭಟಿಸುತ್ತಲೇ ಬರುತ್ತಿದ್ದರೂ ಈ ಸರ್ಕಾರ ಜನಾಕ್ರೋಶಕ್ಕೆ ಕ್ಯಾರೇ ಎನ್ನುತ್ತಿಲ್ಲ, ಅಧಿಕಾರಕ್ಕಾಗಿ ಕಚ್ಚಾಡುವುದನ್ನು ಬಿಟ್ಟರೆ ಕಾಂಗ್ರೆಸ್ ಸರ್ಕಾರದ ಅಂಗಳದಲ್ಲಿ ಏನೇನು ಈಗ ಉಳಿದಿಲ್ಲ, ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಬೆಲೆ ಏರಿಸುವುದನ್ನು ಬಿಟ್ಟರೆ ಅನ್ಯಮಾರ್ಗವಿಲ್ಲ ಎಂಬ ಪರಿಸ್ಥಿತಿ ಇರುವುದನ್ನು ಸರ್ಕಾರ ಅನಾವರಣಗೊಳಿಸಿಕೊಳ್ಳುತ್ತಿದೆ. ಪ್ರತಿಯೊಂದು ಕುಟುಂಬವೂ ಬಳಸುವ ಹಾಲಿನ ದರವನ್ನು ಏರಿಸಲು ಸಂಪುಟ ನಿರ್ಧರಿಸಿರುವ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

59 mins ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

1 hour ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

1 hour ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

2 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

3 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

4 hours ago