ರಾಜ್ಯ

ಹಾಲಿನ ಏರಿಕೆ| ರಾಜ್ಯ ಸರ್ಕಾರದಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ನಿರ್ಧಾರ ಹಗಲು ದರೋಡೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಮುಂದುವರೆಸಿದ್ದು, ಹಾಲಿನ ದರ 4 ರೂ. ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪಂಚ ಭಾಗ್ಯಗಳನ್ನು ನಿರ್ವಹಿಸಲು ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರಿಗೆ ಬೆಲೆ ಏರಿಕೆಯ ದೌರ್ಭಾಗ್ಯವನ್ನು ನಿರಂತರ ಹೇರುತ್ತಲೇ ಬರುತ್ತಿದೆ. ಕುಡಿಯುವ ನೀರು, ವಿದ್ಯುತ್ ಬಿಲ್, ಸಾರಿಗೆ, ಅಗತ್ಯ ವಸ್ತುಗಳು ಹೀಗೆ ಒಂದರ ಮೇಲೊಂದರಂತೆ ಬೆಲೆ ಏರಿಕೆಯ ಬಿಸಿಯನ್ನು ಜನ ಅನುಭವಿಸುತ್ತಿರುವ ಹೊತ್ತಿನಲ್ಲೇ, ಈ ಸರ್ಕಾರ ಅಧಿಕಾರಕ್ಕೆ ಬಂದಮೇಲೆ 2 ನೇ ಬಾರಿ ಹಾಲಿನ ದರ ಏರಿಕೆ ಮಾಡುವ ಮೂಲಕ ಬೆಲೆ ಏರಿಕೆ ಬರೆ ಎಳೆಯುವಲ್ಲಿ ಪೈಪೋಟಿಗೆ ಬಿದ್ದಂತೆ ಕಾಣುತ್ತಿದೆ. ಸದ್ಯ ಹಾಲಿನ ದರ 4 ರೂ. ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ಕಿಡಿಕಾರಿದ್ದಾರೆ.

ಹೈನುಗಾರಿಕೆ ಅವಲಂಬಿಸಿರುವ ರೈತ ಸಮುದಾಯಕ್ಕೆ ಹೆಚ್ಚಿನ ದರ ಹಾಗೂ ಪ್ರೋತ್ಸಾಹ ಧನವನ್ನು ಕೊಡುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕೇ ಹೊರತು, ಈ ಕಾರಣವನ್ನು ಮುಂದಿಟ್ಟುಕೊಂಡು ಜನರ ಮೇಲೆ ಬೆಲೆ ಏರಿಕೆಯ ಬಿಸಿ ತಟ್ಟಿಸಲು ಹೊರಟಿರುವುದು ‘ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ನಡೆಯಾಗುತ್ತದೆ’. ರೈತರನ್ನೂ ಉತ್ತೇಜಿಸಬೇಕು ಜನಸಾಮಾನ್ಯರ ಹಿತಾಸಕ್ತಿಯನ್ನೂ ಕಾಪಾಡಬೇಕು, ಇದು ಸಮರ್ಥ ಜನಪರ ಹಾಗೂ ಯೋಗ್ಯ ಸರ್ಕಾರದಿಂದ ಮಾತ್ರ ಸಾಧ್ಯವಾಗುತ್ತದೆ. ಇಂತಹ ಯಾವ ಅರ್ಹತೆಗಳೂ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವೇ ಇಲ್ಲ ಎಂದು ದೂರಿದ್ದಾರೆ.

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯನ್ನು ನಮ್ಮ ಬಿಜೆಪಿ ಪಕ್ಷ ನಿರಂತರ ಪ್ರತಿಭಟಿಸುತ್ತಲೇ ಬರುತ್ತಿದ್ದರೂ ಈ ಸರ್ಕಾರ ಜನಾಕ್ರೋಶಕ್ಕೆ ಕ್ಯಾರೇ ಎನ್ನುತ್ತಿಲ್ಲ, ಅಧಿಕಾರಕ್ಕಾಗಿ ಕಚ್ಚಾಡುವುದನ್ನು ಬಿಟ್ಟರೆ ಕಾಂಗ್ರೆಸ್ ಸರ್ಕಾರದ ಅಂಗಳದಲ್ಲಿ ಏನೇನು ಈಗ ಉಳಿದಿಲ್ಲ, ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಬೆಲೆ ಏರಿಸುವುದನ್ನು ಬಿಟ್ಟರೆ ಅನ್ಯಮಾರ್ಗವಿಲ್ಲ ಎಂಬ ಪರಿಸ್ಥಿತಿ ಇರುವುದನ್ನು ಸರ್ಕಾರ ಅನಾವರಣಗೊಳಿಸಿಕೊಳ್ಳುತ್ತಿದೆ. ಪ್ರತಿಯೊಂದು ಕುಟುಂಬವೂ ಬಳಸುವ ಹಾಲಿನ ದರವನ್ನು ಏರಿಸಲು ಸಂಪುಟ ನಿರ್ಧರಿಸಿರುವ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಲಿ ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago