ರಾಜ್ಯ

ತ್ಯಾಗ-ಬಲಿದಾನ ನಮ್ಮ ಪಕ್ಷದ ಹೆಗ್ಗಳಿಕೆಯ ಸಂಕೇತ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನಮ್ಮ ಬಿಜೆಪಿ ಪಕ್ಷವೂ ತ್ಯಾಗ ಮತ್ತು ಬಲಿದಾನ ಹೆಗ್ಗಳಿಕೆಯ ಸಂಕೇಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು(ಏಪ್ರಿಲ್‌.6) ಆಯೋಜಿಸಿದ್ದ ಬಿಜೆಪಿ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಹಸ್ರಾರು ತ್ಯಾಗ ಬಲಿದಾನಗಳ ಪ್ರತೀಕವಾಗಿ ಸೈದ್ಧಾಂತಿಕ ಹೋರಾಟದ ಪ್ರತಿಫಲವೇ ಬಿಜೆಪಿ. ಧೀನ ದಲಿತರ ಧ್ವನಿಯಾಗಿ, ದೇಶದ ಏಕತೆಗಾಗಿ ಹೋರಾಡುತ್ತಾ, ಪಕ್ಷ ಕಟ್ಟಿದ ಹಿರಿಯ ನೇತಾರರನ್ನು ಸ್ಮರಿಸಲಾಗಿದೆ ಎಂದರು.

ಸ್ವಂತ ಶಿಸ್ತು, ಬದ್ಧತೆ, ಸಮರ್ಪಣೆಯನ್ನು ಪ್ರತಿ ಕಾರ್ಯಕರ್ತರಲ್ಲಿ ತುಂಬಲು ಸಂಘದ ಹಿರಿಯರು ಬೆನ್ನ ಹಿಂದೆ ನಿಂತು ವಹಿಸಿದ ಪಾತ್ರ ನಾವೆಂದೂ ಮರೆಯುವಂತಿಲ್ಲ. ಸಂಘ ಸಂಸ್ಕಾರದ ಕಾರ್ಯಕರ್ತರಲ್ಲಿ ಭಾರತವನ್ನು ವಿಶ್ವಮಟ್ಟದಲ್ಲಿ ನಂ. 1 ಸ್ಥಾನಕ್ಕೆ ತರುವ ಸದೃಢ ಸಂಕಲ್ಪ ಇದ್ದರೆ, ಅದನ್ನು ಈಡೇರಿಸುವ ಗುರಿಯತ್ತ ಪ್ರಧಾನಿ ನರೇಂದ್ರ ಮೋದಿಯವರು ದಾಪುಗಾಲನ್ನಿಡುತ್ತಿದ್ದಾರೆ ಎಂದು ಹೇಳಿದರು.

ನಮ್ಮ ಸಂಘಟನೆಯ ಶಕ್ತಿಯನ್ನು ಕುಗ್ಗಿಸಲು ದುಷ್ಟ ಕಾಂಗ್ರೆಸ್ ಸರ್ಕಾರ ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಮಟ್ಟಿಗೆ ಬೆದರಿಸುತ್ತಿದೆ. ಈ ಸಂಸ್ಥಾಪನೆಯ ದಿನ ನಾವೆಲ್ಲರೂ ಸಂಕಲ್ಪ ತೊಡೋಣ, ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗಳನ್ನು ಹಿಮ್ಮೆಟ್ಟಿಸಲು ನಾವು ಶಕ್ತರಿದ್ದೇವೆ. ಪ್ರತಿಯೊಬ್ಬ ಕಾರ್ಯಕರ್ತನೊಂದಿಗೆ ಬಿಜೆಪಿ ಕರ್ನಾಟಕ ನೈತಿಕವಾಗಿ ಪ್ರತಿಯೊಬ್ಬ ಕಾರ್ಯಕರ್ತನ ರಕ್ಷಣೆಗೆ ನಿಲ್ಲಲಿದೆ ಎಂದು ಭರವಸೆ ನೀಡಿದು.

ಈ ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ ತೊಲಗಿಸುವವರೆಗೂ ನಾವು ವಿರಮಿಸುವ ಪ್ರಶ್ನೆಯೇ ಇಲ್ಲ, ಆ ಮೂಲಕ ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನೆಯ ಉದ್ದೇಶವನ್ನು ನಾವು ಸಾರ್ಥಕಗೊಳಿಸಲು ಶ್ರಮಿಸೋಣ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago