ಬೆಂಗಳೂರು: ನಮ್ಮ ಬಿಜೆಪಿ ಪಕ್ಷವೂ ತ್ಯಾಗ ಮತ್ತು ಬಲಿದಾನ ಹೆಗ್ಗಳಿಕೆಯ ಸಂಕೇಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು(ಏಪ್ರಿಲ್.6) ಆಯೋಜಿಸಿದ್ದ ಬಿಜೆಪಿ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಹಸ್ರಾರು ತ್ಯಾಗ ಬಲಿದಾನಗಳ ಪ್ರತೀಕವಾಗಿ ಸೈದ್ಧಾಂತಿಕ ಹೋರಾಟದ ಪ್ರತಿಫಲವೇ ಬಿಜೆಪಿ. ಧೀನ ದಲಿತರ ಧ್ವನಿಯಾಗಿ, ದೇಶದ ಏಕತೆಗಾಗಿ ಹೋರಾಡುತ್ತಾ, ಪಕ್ಷ ಕಟ್ಟಿದ ಹಿರಿಯ ನೇತಾರರನ್ನು ಸ್ಮರಿಸಲಾಗಿದೆ ಎಂದರು.
ಸ್ವಂತ ಶಿಸ್ತು, ಬದ್ಧತೆ, ಸಮರ್ಪಣೆಯನ್ನು ಪ್ರತಿ ಕಾರ್ಯಕರ್ತರಲ್ಲಿ ತುಂಬಲು ಸಂಘದ ಹಿರಿಯರು ಬೆನ್ನ ಹಿಂದೆ ನಿಂತು ವಹಿಸಿದ ಪಾತ್ರ ನಾವೆಂದೂ ಮರೆಯುವಂತಿಲ್ಲ. ಸಂಘ ಸಂಸ್ಕಾರದ ಕಾರ್ಯಕರ್ತರಲ್ಲಿ ಭಾರತವನ್ನು ವಿಶ್ವಮಟ್ಟದಲ್ಲಿ ನಂ. 1 ಸ್ಥಾನಕ್ಕೆ ತರುವ ಸದೃಢ ಸಂಕಲ್ಪ ಇದ್ದರೆ, ಅದನ್ನು ಈಡೇರಿಸುವ ಗುರಿಯತ್ತ ಪ್ರಧಾನಿ ನರೇಂದ್ರ ಮೋದಿಯವರು ದಾಪುಗಾಲನ್ನಿಡುತ್ತಿದ್ದಾರೆ ಎಂದು ಹೇಳಿದರು.
ನಮ್ಮ ಸಂಘಟನೆಯ ಶಕ್ತಿಯನ್ನು ಕುಗ್ಗಿಸಲು ದುಷ್ಟ ಕಾಂಗ್ರೆಸ್ ಸರ್ಕಾರ ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಮಟ್ಟಿಗೆ ಬೆದರಿಸುತ್ತಿದೆ. ಈ ಸಂಸ್ಥಾಪನೆಯ ದಿನ ನಾವೆಲ್ಲರೂ ಸಂಕಲ್ಪ ತೊಡೋಣ, ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗಳನ್ನು ಹಿಮ್ಮೆಟ್ಟಿಸಲು ನಾವು ಶಕ್ತರಿದ್ದೇವೆ. ಪ್ರತಿಯೊಬ್ಬ ಕಾರ್ಯಕರ್ತನೊಂದಿಗೆ ಬಿಜೆಪಿ ಕರ್ನಾಟಕ ನೈತಿಕವಾಗಿ ಪ್ರತಿಯೊಬ್ಬ ಕಾರ್ಯಕರ್ತನ ರಕ್ಷಣೆಗೆ ನಿಲ್ಲಲಿದೆ ಎಂದು ಭರವಸೆ ನೀಡಿದು.
ಈ ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ ತೊಲಗಿಸುವವರೆಗೂ ನಾವು ವಿರಮಿಸುವ ಪ್ರಶ್ನೆಯೇ ಇಲ್ಲ, ಆ ಮೂಲಕ ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನೆಯ ಉದ್ದೇಶವನ್ನು ನಾವು ಸಾರ್ಥಕಗೊಳಿಸಲು ಶ್ರಮಿಸೋಣ ಎಂದು ತಿಳಿಸಿದರು.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…