ಬೆಂಗಳೂರು: ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಟ್ಟು, ಬೋಲ್ಟ್ಗಳು ಸಡಿಲವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ಇಂದಿನ ಬಜೆಟ್ ಅಧಿವೇಶನ ಬಗೆಗಿನ ರಾಜ್ಯಪಾಲರ ಭಾಷಣದಲ್ಲಿ ರಾಜ್ಯಪಾಲರ ಸಮಯವನ್ನು ವ್ಯರ್ಥ ಮಾಡಿದ್ದು, ಅವರಿಂದ ಹುಸಿ ಸುಳ್ಳು ಹೇಳಿಸಿದ್ದಾರೆ. ಆದರೆ ಈ ಭಾಷಣದಲ್ಲಿ ಅಭಿವೃಧ್ಧಿ ವಿಚಾರ ಬಂದಾಗ ರಾಜ್ಯ ಸರ್ಕಾರದ ನಟ್ಟು, ಬೋಲ್ಟ್ ಸಡಿಲವಾಗಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಟೀಕಿಸಿದರು.
ರಾಜ್ಯಪಾಲರು ಮಾಡಿರುವ ಭಾಷಣ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದ್ದು, ವಿಧಿಯಿಲ್ಲದೇ ಭಾಷಣ ಮಾಡಿದ್ದಾರೆ. ಆ ಭಾಷಣದಲ್ಲಿ ಸರ್ಕಾರ ಮಾಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಪ್ರಸ್ತಾಪವೇ ಇಲ್ಲ. ಎರಡು ವರ್ಷಗಳಿಂದ ನಾವು ಅಭಿವೃದ್ಧಿ ಭಾಗ್ಯವನ್ನು ಹೆಚ್ಚಿಸಿದ್ದೇವೆ ಎಂದು ಸುಳ್ಳು ಹೇಳಿಸಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯೇ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…