ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಾನೂನು ವ್ಯವಸ್ಥೆ ಹಾಳಾಗಿದ್ದು, ಸಂಪೂರ್ಣವಾಗಿ ನೆಲಕಚ್ಚಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ. ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರೀಕರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಿ ದೈಹಿಕ ಹಲ್ಲೆಗೂ ಮುಂದಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚಿತ್ರದುರ್ಗದಲ್ಲಿ ನಮ್ಮ ಪಕ್ಷದ ಮಧುಗಿರಿ (ಸಂಘಟನಾತ್ಮಕ ಜಿಲ್ಲೆ) ಜಿಲ್ಲಾಧ್ಯಕ್ಷರಾದ ಹನುಮಂತೇಗೌಡ ಅವರ ಮೇಲೆ ಪಿಎಸ್ಐ ಗಾದಿಲಿಂಗಪ್ಪ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದು ಇದನ್ನು ಬಿಜೆಪಿ ಪಕ್ಷ ಅತ್ಯುಗ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.
ನಾಗರೀಕ ಸಮಾಜದಲ್ಲಿ ಶಾಂತಿ ಸಂರಕ್ಷಿಸಲಾಗದ ಅಧಿಕಾರಿಗಳು ಮಧ್ಯರಾತ್ರಿಯಲ್ಲಿ ತಮ್ಮ ಪೊಲೀಸ್ ರೌದ್ರಾವತಾರ ಪ್ರದರ್ಶಿಸಲು ಹೊರಟಿದ್ದಾರೆ. ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸುವ ಮುನ್ನ ಅವರ ಸಾಮಾಜಿಕ ಸ್ಥಾನಮಾನವನ್ನೂ ಲೆಕ್ಕಿಸದೆ ಗೂಂಡಾಗಿರಿ ಪ್ರದರ್ಶಿಸುವುದು ಪೋಲಿಸ್ ಇಲಾಖೆಯ ದಕ್ಷತೆಯ ಘನತೆಯನ್ನು ಕಳೆದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪ್ರಭಾವಿಗಳಿಂದ ಆಯಾ ಕಟ್ಟಿನ ಸ್ಥಾನದಲ್ಲಿ ಕುಳಿತುಕೊಂಡಿರುವ ಕೆಲವು ಪೊಲೀಸ್ ಅಧಿಕಾರಿಗಳು ತಮಗೆ ಯಾರೂ ಏನೂ ಮಾಡಲಾಗದು ಎಂಬ ಮನಸ್ಥಿತಿಯನ್ನು ಮೈಗೂಡಿಸಿಕೊಂಡಿದ್ದು ಎಲ್ಲೆಂದರಲ್ಲಿ ತಮ್ಮ ದರ್ಪ ಪ್ರದರ್ಶಿಸುತ್ತಿದ್ದಾರೆ. ಚಿತ್ರದುರ್ಗದ ಘಟನೆಯ ಹಿಂದೆ ರಾಜಕಾರಣದ ಪ್ರಚೋದನೆ ಇರುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು, ಅಧಿಕಾರಸ್ತ ರಾಜಕಾರಣಿಗಳ ಕೈಗೊಂಬೆಯಂತೆ ವರ್ತಿಸುತ್ತಿರುವ ಪೊಲೀಸರು ಇಲಾಖೆಯ ಗೌರವ ಕಳೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಚಿತ್ರದುರ್ಗದ ಪಿಎಸ್ಐ ಗಾದಿಲಿಂಗಪ್ಪ ಅವರನ್ನು ಈ ಕೂಡಲೇ ಪೊಲೀಸ್ ಮಹಾನಿರ್ದೇಶಕರು ಅಮಾನತ್ತಿನಲ್ಲಿಡದಿದ್ದರೆ ಬಿಜೆಪಿಯೂ ನಾಗರೀಕರೊಡಗೂಡಿ ಹೋರಾಟ ನಡೆಸುವುದು ಅನಿವಾರ್ಯವಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…